-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತ್ಯಾಜ್ಯ ನಗರವಾದ ಸ್ಮಾರ್ಟ್ ಸಿಟಿ ಮಂಗಳೂರು: ಆರು ದಿನವಾದರೂ ತಲೆಕೆಡಿಸಿಕೊಳ್ಳದ ಪಾಲಿಕೆ!!!

ತ್ಯಾಜ್ಯ ನಗರವಾದ ಸ್ಮಾರ್ಟ್ ಸಿಟಿ ಮಂಗಳೂರು: ಆರು ದಿನವಾದರೂ ತಲೆಕೆಡಿಸಿಕೊಳ್ಳದ ಪಾಲಿಕೆ!!!

ತ್ಯಾಜ್ಯ ನಗರವಾದ ಸ್ಮಾರ್ಟ್ ಸಿಟಿ ಮಂಗಳೂರು: ಆರು ದಿನವಾದರೂ ತಲೆಕೆಡಿಸಿಕೊಳ್ಳದ ಪಾಲಿಕೆ





ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಸ ವಿಲೇವಾರಿ ಸ್ಥಗಿತಗೊಂಡಿದೆ. ಆರು ದಿನಗಳಿಂದ ತ್ಯಾಜ್ಯ ವಿಲೇವಾರಿ ನಡೆಯದಿದ್ದರೂ ಮಂಗಳೂರು ಮಹಾನಗರ ಪಾಲಿಕೆ ಮಾತ್ರ ಗುಮ್ಮನಂತೆ ಸುಮ್ಮನೆ ಕುಳಿತಿದೆ.



ನಗರದ ಜನರು ಮಾತ್ರ ಈ ಸಂದಿಗ್ಧ ಪರಿಸ್ಥಿತಿಯಿಂದ ಹೈರಾಣಾಗಿದ್ದು, ಮನೆಯಲ್ಲಿ ತ್ಯಾಜ್ಯದ ರಾಶಿಯಿಂದ ತಲೆಗೆ ಕೈಹೊತ್ತಿದ್ದಾರೆ.



ಸ್ಮಾರ್ಟ್‌ ಸಿಟಿ ಎಂಬ ಹಣೆಪಟ್ಟಿ ಪಡೆದಿರುವ ಮಂಗಳೂರು ತ್ಯಾಜ್ಯ ನಗರಿಯಾಗಿ ಪರಿವರ್ತನೆಯಾಗಿದೆ. ವಿಂಗಡಣೆಯಾಗಿರುವ ಕಸದ ವಿಲೇವಾರಿ ಸಮಸ್ಯೆಯಾಗಿದೆ.



ತ್ಯಾಜ್ಯ ವಿಲೇವಾರಿ ನೌಕರರ ಪ್ರತಿಭಟನೆ ಇದಕ್ಕೆ ಕಾರಣ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ. ಯಾವುದೇ ಪರ್ಯಾಯ ವ್ಯವಸ್ಥೆಯನ್ನೂ ಕಲ್ಪಿಸಿಲ್ಲ.



ಕಸ ಎಲ್ಲೆಂದರಲ್ಲಿ ಎಸೆದರೆ ಅಪರಾಧ. ನಾವು ತ್ಯಾಜ್ಯ ಕರ (ಟ್ಯಾಕ್ಸ್) ಕಟ್ಟಿದ್ದರೂ ಮನೆ ಬಾಗಿಲಿನಿಂದ ಕಸ ತೆಗೆಯುತ್ತಿಲ್ಲ. ನಮಗೆ ಏಕೆ ಈ ಶಿಕ್ಷೆ ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಪರಿಸ್ಥಿತಿ ಹೀಗೆ ಮುಂದುವರಿದರೆ, ಪಾಲಿಕೆಯ ಕಚೇರಿ ಮುಂದೆ ಕಸವನ್ನು ರಾಶಿ ಹಾಕುವ ಬಗ್ಗೆ ನಾಗರಿಕರು ಚಿಂತನೆ ನಡೆಸುತ್ತಿದ್ದಾರೆ.


ಪರಿಸ್ಥಿತಿ ಕೈಮೀರುವ ಮುನ್ನ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುವುದು ಒಳಿತು.

Ads on article

Advertise in articles 1

advertising articles 2

Advertise under the article

ಸುರ