-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉತ್ತರಪ್ರದೇಶ: ಇನ್ನು ಕೆಲವೇ ಕ್ಷಣಗಳಲ್ಲಿ ಈ ಬೃಹತ್ ಅವಳಿ ಗೋಪುರ ಇತಿಹಾಸದ ಪುಟ ಸೇರಲಿದೆ; ಕೇವಲ‌ 12 ಸೆಕೆಂಡ್ ಗಳ ಕಾರ್ಯಾಚರಣೆ

ಉತ್ತರಪ್ರದೇಶ: ಇನ್ನು ಕೆಲವೇ ಕ್ಷಣಗಳಲ್ಲಿ ಈ ಬೃಹತ್ ಅವಳಿ ಗೋಪುರ ಇತಿಹಾಸದ ಪುಟ ಸೇರಲಿದೆ; ಕೇವಲ‌ 12 ಸೆಕೆಂಡ್ ಗಳ ಕಾರ್ಯಾಚರಣೆ

ನೋಯ್ಡಾ ( ಉತ್ತರ ಪ್ರದೇಶ ): ಸೂಪರ್ ಟೆಕ್ ಅಪೆಕ್ಸ್ ಮತ್ತು ಸಿಯಾನಿ ಎಂಬ ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬೃಹತ್ ಅವಳಿ ಗೋಪುರವಾದ ಈ ಕಟ್ಟಡಗಳು ಇನ್ನು ಕೆಲವೇ ಗಂಟೆಗಳಲ್ಲಿ ಇತಿಹಾಸದ ಪುಟ ಸೇರಲಿದೆ. 

ಹೌದು... 2004 ರಲ್ಲಿ ನಿರ್ಮಾಣವಾಗಿರುವ ಈ ಗೋಪುರದ ನಿರ್ಮಾಣ ಕಾರ್ಯಕ್ಕೆ ತಗುಲಿದ್ದು ಸುಮಾರು 70 ಕೋಟಿ ರೂ. ವರ್ಷಗಟ್ಟಲೆ ಸಮಯದಲ್ಲಿ ನಿರ್ಮಾಣ ಆಗಿರುವ ಈ ಕಟ್ಟಡ ಕೇವಲ 12 ಸೆಕೆಂಡ್‌ಗಳಲ್ಲಿ ಧರೆಗೆ ಉರುಳಲಿದೆ. ಈ ಕಟ್ಟಡ ಕೆಡವಲು ರವಿವಾರ ಮಧ್ಯಾಹ್ನ 2.30 ರ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಅಷ್ಟಕ್ಕೂ ಈ ಕಟ್ಟಡವನ್ನು ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕೆಡವಿ ಹಾಕಲಾಗುತ್ತದೆ. 

ಈ ಅವಳಿ ಕಟ್ಟಡಗಳಲ್ಲಿ ಒಂದು ಕಟ್ಟಡ 103 ಮೀಟರ್ ಹಾಗೂ ಇನ್ನೊಂದು 97 ಮೀಟರ್ ಎತ್ತರವಿದೆ. ಈ ಗೋಪುರದಲ್ಲಿ ಒಟ್ಟು 915 ಫ್ಲ್ಯಾಟ್‌ಗಳು, 20 ಕಮರ್ಷಿಯಲ್ ಅಂಗಡಿಗಳಿವೆ. ಈ ಗೋಪುರಗಳನ್ನು ಅಕ್ರಮವಾಗಿ ಕಟ್ಟಿರುವ ಕಾರಣಕ್ಕೆ ನೆಲಸಮ ಮಾಡಲು ಸುಪ್ರೀಂಕೋರ್ಟ್ ಆದೇಶಿಸಿದೆ. ಸೂಪರ್ ಟೆಕ್ ಎಮರಾಲ್ಡ್ ಸಂಸ್ಥೆ ನಿಯಮಾವಳಿ ಉಲ್ಲಂಘಿಸಿ ನಿರ್ಮಿಸಿರುವ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ನಿಬಂಧನೆಗಳಿಗೆ ವಿರುದ್ಧವಾಗಿ ನಿರ್ಮಿಸುತ್ತಿದ್ದ ಅವಳಿ ಗೋಪುರಗಳನ್ನು ಕೆಡವಲು ಆದೇಶಿಸಿತ್ತು.

ಇದಾಗಲೇ ಗೋಪುರ ನೆಲಸಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿಕೊಂಡಿದೆ. ನೆಲಸಮಕ್ಕಿಂತ ಮೊದಲಿನ ಪ್ರಕ್ರಿಯೆ ನಸುಕಿನಲ್ಲಿಯೇ ಶುರುವಾಗಿದೆ. ಈ ಕಾರ್ಯಾಚರಣೆಗೋಸ್ಕರ 3,700 ಕೆಜಿ ಸ್ಫೋಟಕ ಬಳಕೆ ಮಾಡಿಕೊಳ್ಳುತ್ತಿದೆ. ಎನ್‌ಡಿಆರ್‌ಎಫ್ , ಸಿಬಿಆರ್‌ಐ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳದಲ್ಲಿ ಹಾಜರು ಇರಲಿದ್ದಾರೆ . ಈ ಗೋಪುರಗಳ ಸುತ್ತಮುತ್ತ ಸುಮಾರು 7 ಸಾವಿರ ಜನರು ವಾಸವಾಗಿದ್ದು , ಇದಾಗಲೇ ಅವರನ್ನು ಸ್ಥಳಾಂತರ ಮಾಡಲಾಗಿದೆ . ಸಂಜೆ 5 ಗಂಟೆಗೆ ಎಲ್ಲ ಸೇವೆ ಪುನಾರಂಭಗೊಳ್ಳಲಿವೆ . ನಂತರ ಎಲ್ಲ ನಿವಾಸಿಗಳು ತಮ್ಮ ಮನೆಗಳಿಗೆ ತೆರಳಬಹುದು ಎಂದು ಸೂಚನೆ ನೀಡಲಾಗಿದೆ . ಪ್ರದೇಶದಲ್ಲಿ ವಿದ್ಯುತ್ , ಅನಿಲ್ ಸೇರಿದಂತೆ ಎಲ್ಲ ಸೇವೆಗಳ ಬಂದ್ ಆಗಿವೆ. 

Ads on article

Advertise in articles 1

advertising articles 2

Advertise under the article

ಸುರ