-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪೊಲೀಸ್ ಕೈಯಿಂದ ತಪ್ಪಿಸಲು ಹೋಗಿ ಆಸ್ಪತ್ರೆಯ 3ನೇ ಮಹಡಿಯಿಂದ ಬಿದ್ದು ದರೋಡೆ ಆರೋಪಿ ಮೃತ್ಯು

ಪೊಲೀಸ್ ಕೈಯಿಂದ ತಪ್ಪಿಸಲು ಹೋಗಿ ಆಸ್ಪತ್ರೆಯ 3ನೇ ಮಹಡಿಯಿಂದ ಬಿದ್ದು ದರೋಡೆ ಆರೋಪಿ ಮೃತ್ಯು

ಕಲಬುರಗಿ: ಪೊಲೀಸ್ ಕೈಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ 3ನೇ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟಿರುವ ಘಟನೆ ನಡೆದಿದೆ.

 ಕಲಬುರಗಿಯ ಹಮಾಲವಾಡಿ ಬಡಾವಣೆಯ ನಿವಾಸಿ ಮುನ್ನಾ ಅಲಿಯಾಸ್ ಶೇಖ್ ಸೋಹಲ್ ಮೃತಪಟ್ಟ ಆರೋಪಿ.

ಶೇಖ್ ಸೋಹಲ್ ನನ್ನು ಪೊಲೀಸರು ದರೋಡೆ ಪ್ರಕರಣದಲ್ಲಿ ಬ್ರಹ್ಮಪೂರ ಪೊಲೀಸರ ಬಂಧಿಸಿದ್ದರು. ಈತನನ್ನು ನ್ಯಾಯಾಲಯದ ಮುಂದೆ ಹಾಜರಿಪಡಿಸುವ ಪೂರ್ವದಲ್ಲಿ ಕೋವಿಡ್ ತಪಾಸಣೆಗೆಂದು ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಕೋವಿಡ್ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಈತ, ಆಸ್ಪತ್ರೆಯ ಮೂರನೇ ಮಹಡಿ ಹತ್ತಿ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ 

Ads on article

Advertise in articles 1

advertising articles 2

Advertise under the article