-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನಿಂತಿದ್ದ ಟ್ರಕ್ ಗೆ ಕಾರು ಢಿಕ್ಕಿ: ದುರ್ಮರಣಕ್ಕೀಡಾದ ತಿರುಪತಿ ಯಾತ್ರಿಗಳು

ನಿಂತಿದ್ದ ಟ್ರಕ್ ಗೆ ಕಾರು ಢಿಕ್ಕಿ: ದುರ್ಮರಣಕ್ಕೀಡಾದ ತಿರುಪತಿ ಯಾತ್ರಿಗಳು


ಆಂಧ್ರಪ್ರದೇಶ: ಇಲ್ಲಿನ ಪ್ರಕಾಶಂ ಜಿಲ್ಲೆಯ ಕಂಭಂ ಎಂಬಲ್ಲಿ ನಡೆದಿರುವ ಭೀಕರ ಅಪಘಾತಕ್ಕೆ ಐವರು ತಿರುಪತಿ ಯಾತ್ರಿಗಳು ದುರ್ಮರ್ಣಕ್ಕೀಡಾಗಿದ್ದಾರೆ.

ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​ವೊಂದಕ್ಕೆ ಹಿಂಬದಿಯಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮಾಚರ್ಲದಿಂದ ತಿರುಪತಿಗೆ ಹೋಗುತ್ತಿದ್ದ ಈ ತಿರುಪತಿ ಯಾತ್ರಿಗಳು ಈ ದುರ್ಘಟನೆಯಲ್ಲಿ ಬಲಿಯಾಗಿದ್ದಾರೆ.

ಪಲ್ನಾಡು ಜಿಲ್ಲೆಯ ವೆಲ್ದುರ್ತಿ ತಾಲೂಕಿನ ಸಿರಿಗಿರಿಪಾಡು ನಿವಾಸಿಗಳಾದ ಅನಿಮಿ ರೆಡ್ಡಿ (60), ಗುರವಮ್ಮ (60), ಅನಂತಮ್ಮ (55), ಆದಿಲಕ್ಷ್ಮಿ (58) ಮತ್ತು ನಾಗಿರೆಡ್ಡಿ (24) ಮೃತಪಟ್ಟ ದುರ್ದೈವಿಗಳು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ನಿಂತ ಟ್ರಕ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜಾಗಿದೆ. ಈ ಅಪಘಾತ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.


Ads on article

Advertise in articles 1

advertising articles 2

Advertise under the article

ಸುರ