-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಲ್ವಾ ತಂದ ಸಂಕಷ್ಟ: ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ಹಲ್ವಾ ತಂದ ಸಂಕಷ್ಟ: ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ಕೊಚ್ಚಿ: ಬೇಕರಿಯಿಂದ ತಂದಿದ್ದ ಹಲ್ವಾ ತಿನ್ನುತ್ತಿದ್ದಾಗ ಶ್ವಾಸನಾಳದಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದಲ್ಲಿ ಶುಕ್ರವಾರ ವರದಿಯಾಗಿದೆ.

ಕೇರಳದ ಥಾಮರಾ ಮುಕ್ಕುವಿನ ಚೆರುಪುಲ್ಲಿಪರಂಬುವಿನ ನಿವಾಸಿ ನಿಜಾರ್ (49) ಮೃತಪಟ್ಟವರು. 

ನಿಜಾರ್ ಬುಧವಾರ ಬೆಳಗ್ಗೆ ಬೇಕರಿಯಿಂದ ಹಲ್ವಾ ಕೊಂಡು ತಂದು ಮನೆಯಲ್ಲಿ ಸೇವಿಸಿದ್ದರು. ಆದರೆ ಹಲ್ವಾ ಅವರ ಶ್ವಾಸನಾಳದಲ್ಲಿ ಸಿಲುಕಿ ಉಸಿರಾಟದ ತೊಂದರೆ ಉಂಟಾಗಿದೆ.‌ ಪರಿಣಾಮ ಅವರು ಕುಸಿದು ಬಿದ್ದಿದ್ದಾರೆ.  ತಕ್ಷಣ ಅವರನ್ನು ಸ್ಥಳೀಯರು ಛಕಲಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ . 

Ads on article

Advertise in articles 1

advertising articles 2

Advertise under the article