-->

ಹಲ್ವಾ ತಂದ ಸಂಕಷ್ಟ: ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ಹಲ್ವಾ ತಂದ ಸಂಕಷ್ಟ: ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ಕೊಚ್ಚಿ: ಬೇಕರಿಯಿಂದ ತಂದಿದ್ದ ಹಲ್ವಾ ತಿನ್ನುತ್ತಿದ್ದಾಗ ಶ್ವಾಸನಾಳದಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಕೇರಳದಲ್ಲಿ ಶುಕ್ರವಾರ ವರದಿಯಾಗಿದೆ.

ಕೇರಳದ ಥಾಮರಾ ಮುಕ್ಕುವಿನ ಚೆರುಪುಲ್ಲಿಪರಂಬುವಿನ ನಿವಾಸಿ ನಿಜಾರ್ (49) ಮೃತಪಟ್ಟವರು. 

ನಿಜಾರ್ ಬುಧವಾರ ಬೆಳಗ್ಗೆ ಬೇಕರಿಯಿಂದ ಹಲ್ವಾ ಕೊಂಡು ತಂದು ಮನೆಯಲ್ಲಿ ಸೇವಿಸಿದ್ದರು. ಆದರೆ ಹಲ್ವಾ ಅವರ ಶ್ವಾಸನಾಳದಲ್ಲಿ ಸಿಲುಕಿ ಉಸಿರಾಟದ ತೊಂದರೆ ಉಂಟಾಗಿದೆ.‌ ಪರಿಣಾಮ ಅವರು ಕುಸಿದು ಬಿದ್ದಿದ್ದಾರೆ.  ತಕ್ಷಣ ಅವರನ್ನು ಸ್ಥಳೀಯರು ಛಕಲಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮೃತಪಟ್ಟಿದ್ದಾರೆ . 

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article