-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಫಾಜಿಲ್ ಮರ್ಡರ್ ಆರೋಪಿಗಳಿಗೆ ರಾಜಾತಿಥ್ಯ ನೀಡಿಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ

ಫಾಜಿಲ್ ಮರ್ಡರ್ ಆರೋಪಿಗಳಿಗೆ ರಾಜಾತಿಥ್ಯ ನೀಡಿಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ

ಫಾಜಿಲ್ ಮರ್ಡರ್ ಆರೋಪಿಗಳಿಗೆ ರಾಜಾತಿಥ್ಯ ನೀಡಿಲ್ಲ: ಪೊಲೀಸ್ ಆಯುಕ್ತರ ಸ್ಪಷ್ಟನೆ





ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.




ಮಂಗಳೂರಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕೆಲವು ಪ್ರಮುಖರು ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ನಿಯಮ ಅನುಸಾರವೇ ವ್ಯವಹರಿಸಲಾಗಿದೆ. ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಗೊತ್ತಾಗಿಲ್ಲ ಎಂದರು.




ಕಳೆದ ಸೋಮವಾರ ಬೆಳಗ್ಗೆ ಮುಹಮ್ಮದ್ ಫಾಜಿಲ್ ಮನೆ ಬಳಿ ಹೋಗಿದ್ದೆ. ಈ ವೇಳೆ ಅಲ್ಲಿ ಮಾತನಾಡಲು ಗಂಡಸರು ಯಾರೂ ಇರಲಿಲ್ಲ. ಅವರ ಕುಟುಂಬದ ಬಹುತೇಕ ಸದಸ್ಯರಲ್ಲಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್‌ ಗಳಿವೆ. ಇಂತಹ ಆಧಾರರಹಿತ ಹೇಳಿಕೆ ನೀಡುವ ಬದಲು ನೇರವಾಗಿ ನನ್ನ ಗಮನಕ್ಕೆ ತರಬಹುದು ಎಂದು ಅವರು ಹೇಳಿದರು.




ಮೊಹಮ್ಮದ್ ಫಾಜಿಲ್ ಕೊಲೆ ನಗರದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪ್ರಕರಣವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳನ್ನು ರಾಜಾರೋಷವಾಗಿ ತಿರುಗಾಡಲು ಬಿಡುವ ಪ್ರಮೇಯವೇ ಇಲ್ಲ ಎಂದರು.

Ads on article

Advertise in articles 1

advertising articles 2

Advertise under the article

ಸುರ