-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Kadaba :- ಕೊಟ್ಟಿಗೆಗೆ ಸಿಡಿಲು ಬಡಿದು ದನ ಬಲಿ.ವಯರಿಂಗ್ ಸಂಪೂರ್ಣ ನಾಶ..!

Kadaba :- ಕೊಟ್ಟಿಗೆಗೆ ಸಿಡಿಲು ಬಡಿದು ದನ ಬಲಿ.ವಯರಿಂಗ್ ಸಂಪೂರ್ಣ ನಾಶ..!

ಕಡಬ

ಕಡಬ ಪರಿಸರದಲ್ಲಿ ಮಂಗಳವಾರ ಸಂಜೆ ಸಿಡಿಲಿನ ಆರ್ಭಟದೊಂದಿಗೆ ಭಾರಿ ಗಾಳಿ‌ ಮಳೆಯಾಗಿದ್ದು, ಮರ್ಧಾಳದಲ್ಲಿ ಕೊಟ್ಟಿಗೆಯೊಂದಕ್ಕೆ ಸಿಡಿಲು ಬಿದ್ದ ಪರಿಣಾಮ ದನವೊಂದು ಬಲಿಯಾದ ಘಟನೆ ನಡೆದಿದೆ.

ಮರ್ಧಾಳ ಸಮೀಪದ ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಕೊರಗಪ್ಪ ಗೌಡ
ಎಂಬವರ ಮನೆಯ ವಯರಿಂಗ್ ಸಿಡಿಲಿನ ಆರ್ಭಟಕ್ಕೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಇನವರ್ಟರ್ ಗೆ ಹಾನಿಯಾಗಿದೆ. ದನದ ಕೊಟ್ಟಿಗೆಗೆ ಸಿಡಿಲು ಬಡಿದ ಪರಿಣಾಮ ಹಸುವೊಂದು ಅಸುನೀಗಿದೆ. ಕೊಟ್ಟಿಗೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಈ ಸಮಯದಲ್ಲಿ ಮನೆ ಮಂದಿ ಹೊರಗಡೆ ಇದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಪರಿಸರದ ಹಲವೆಡೆ ಭಾರೀ ಗಾಳಿ ಮಳೆಗೆ ಅಪಾರ ಕೃಷಿ ಹಾನಿಯಾಗಿದೆ. ಅಡಿಕೆ ಮರಗಳು, ಬಾಳೆ ಗಿಡಗಳು ನೆಲಕ್ಕುರುಳಿವೆ.

Ads on article

Advertise in articles 1

advertising articles 2

Advertise under the article