-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಾವು ಕಚ್ಚಿ ಮೃತಪಟ್ಟ ಸಹೋದರನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ತಮ್ಮನೂ ಹಾವು ಕಚ್ಚಿ ಮೃತ್ಯು!

ಹಾವು ಕಚ್ಚಿ ಮೃತಪಟ್ಟ ಸಹೋದರನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ತಮ್ಮನೂ ಹಾವು ಕಚ್ಚಿ ಮೃತ್ಯು!

ಬಲರಾಮಪುರ: ಹಾವಿನ ಕಡಿತದಿಂದ ಮೃತಪಟ್ಟ ಸಹೋದರನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ತಮ್ಮನೂ ಹಾವು ಕಡಿತಕ್ಕೊಳಗಾಗಿ ಸಾವಿಗೀಡಾಗಿರುವ ದುರಂತವೊಂದು ಉತ್ತರ ಪ್ರದೇಶದ ಬಲರಾಮಪುರದಲ್ಲಿ ನಡೆದಿದೆ. 

ಹಾವು ಕಡಿತಕ್ಕೊಳಗಾಗಿ ಅಣ್ಣ ಅರವಿಂದ್​ ಮಿಶ್ರಾ (38) ಮೃತಪಟ್ಟಿದ್ದಾನೆ. ಆತನ ಸಂಸ್ಕಾರಕ್ಕೆಂದು ತಮ್ಮ ಗೋವಿಂದ ಮಿಶ್ರಾ (22) ಬುಧವಾರ ಭವಾನಿಪುರಕ್ಕೆ ಆಗಮಿಸಿದ್ದ. ಮೃತದೇಹದ ದಫನ ಮಾಡುವ ವಿಧಿವಿಧಾನಗಳನ್ನು ಪೂರೈಸಿ ರಾತ್ರಿ ಮನೆಯಲ್ಲಿ ಮಲಗಿದ್ದ ಗೋವಿಂದ ಮಿಶ್ರ ಹಾವು ಕಚ್ಚಿ ಮೃತಪಟ್ಟಿದ್ದಾನೆ. ಅಂದು ಗೋವಿಂದ ಮಿಶ್ರನೊಂದಿಗೆ ಆತನ ಸಂಬಂಧಿ ಚಂದ್ರಶೇಖರ್​ ಪಾಂಡೆ (22) ಮಲಗಿದ್ದ. ಆತನಿಗೂ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ಸರ್ಕಲ್​ ಇನ್ಸ್​ಪೆಕ್ಟರ್​ ರಾಧಾ ರಮಣ್​ ಸಿಂಹ್​ ಮಂಗಳವಾರ ತಿಳಿಸಿದ್ದಾರೆ. 

ಗೋವಿಂದ ಮಿಶ್ರಾ ಹಾಗೂ ಚಂದ್ರಶೇಖರ್ ಪಾಂಡೆ ಇಬ್ಬರೂ ಅರವಿಂದ ಮಿಶ್ರಾ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಲುಧಿಯಾನದಿಂದ ಗ್ರಾಮಕ್ಕೆ ಬಂದಿದ್ದರು. ಹಿರಿಯ ವೈದ್ಯಕೀಯ ಮತ್ತು ಆಡಳಿತ ಅಧಿಕಾರಿಗಳು ಗುರುವಾರ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ