-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಂಗಳೂರು: ದಂತವೈದ್ಯೆ - ಪುತ್ರಿ ನೇಣಿಗೆ ಶರಣು; ಸಾವಿನ ಬಗ್ಗೆ ಶಂಕೆ

ಬೆಂಗಳೂರು: ದಂತವೈದ್ಯೆ - ಪುತ್ರಿ ನೇಣಿಗೆ ಶರಣು; ಸಾವಿನ ಬಗ್ಗೆ ಶಂಕೆ


ಬೆಂಗಳೂರು: ನಗರದ ಬನಶಂಕರಿಯಲ್ಲಿ ದಂತ ವೈದ್ಯೆ ಹಾಗೂ ಆಕೆಯ ಪುತ್ರಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಆದರೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಈ ಸಾವಿನ ಬಗ್ಗೆ ಅನುಮಾನ ಮೂಡಿದೆ‌.



ವಿರಾಜಪೇಟೆ ಮೂಲದ ಡಾ.ಶೈಮಾ ಮುತ್ತಪ್ಪ ( 39 ) ಹಾಗೂ ಇವರ ಪುತ್ರಿ ಆರಾಧನಾ ( 10 ) ಮೃತಪಟ್ಟ ದುರ್ದೈವಿಗಳು. 

ಸೈಮಾ ಪತಿ ನಾರಾಯಣ್ ಕೂಡ ದಂತ ವೈದ್ಯ. ವ್ಯಾಸಂಗ ಮಾಡುತ್ತಿರುವಾಗಲೇ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿ ವಿಚಾರ ಕುಟುಂಬಕ್ಕೆ ತಿಳಿದ ಸಂದರ್ಭದಲ್ಲೇ ಶೈಮಾರ ತಾಯಿ ಮೃತಪಟ್ಟಿದ್ದರು. ಬಳಿಕ ಎರಡೂ ಕುಟುಂಬಗಳನ್ನು ಒಪ್ಪಿಸಿ ಇಬ್ಬರೂ 10 ವರ್ಷದ ಹಿಂದೆ ಮದುವೆ ಆಗಿದ್ದರು. ಇಬ್ಬರೂ ಡೆಂಟಲ್ ಕ್ಲಿನಿಕ್ ನಡೆಸುತ್ತಿದ್ದರು. ದಂಪತಿಗೆ ಓರ್ವ ಪುತ್ರಿಯೂ ಇದ್ದಾಳೆ 


ಶನಿವಾರ ಬೆಳಗ್ಗೆ ಡಾ.ನಾರಾಯಣ್ ಎಂದಿನಂತೆ ಕ್ಲಿನಿಕ್‌ಗೆ ತೆರಳಿದ್ದರು. ಈ ವೇಳೆ ಸೈಮಾ ಮತ್ತು ಮಗು ಮೃತಪಟ್ಟಿದ್ದಾರೆ. ಘಟನೆ ವೇಳೆ ಶೈಮಾ ಸಹೋದರ ಆಸ್ಟ್ರೇಲಿಯಾದಲ್ಲಿದ್ದರು. ಸೋಮವಾರ ಅವರ ಸಹೋದರ ಬಂದು ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 


ಈ ಸಾವಿನ ಬಗ್ಗೆ ಸೈಮಾರ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ.

Ads on article

Advertise in articles 1

advertising articles 2

Advertise under the article

ಸುರ