-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Sulya :- ಪ್ರವೀಣ್ ನೆಟ್ಟಾರು ತನಿಖೆಗೆ ಏನ್ಐಎ ಗೆ ಸಹಕಾರ ನೀಡಲು ಜಿಲ್ಲೆಯ 9 ಮಂದಿ ಪೊಲೀಸ್ ಅಧಿಕಾರಿಗಳ ತಂಡದ ನೇಮಕ..

Sulya :- ಪ್ರವೀಣ್ ನೆಟ್ಟಾರು ತನಿಖೆಗೆ ಏನ್ಐಎ ಗೆ ಸಹಕಾರ ನೀಡಲು ಜಿಲ್ಲೆಯ 9 ಮಂದಿ ಪೊಲೀಸ್ ಅಧಿಕಾರಿಗಳ ತಂಡದ ನೇಮಕ..

ಸುಳ್ಯ 

ಬೆಳ್ಳಾರೆಯ ಯುವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಇದೀಗ ಏನ್ಐಎ ಜೊತೆಗೆ ತನಿಖೆಗೆ ಸಹಕರಿಸಲು ಜಿಲ್ಲೆಯ 9 ಮಂದಿ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕೈಗೆತ್ತಿಕೊಂಡಿದೆ.
ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ ಒಒಡಿ ಮೂಲಕ ಬೆಂಗಳೂರು ಎನ್ಐಎ ವಿಭಾಗದ ಅಧಿಕಾರಿಗಳ‌ ಜೊತೆ ಪ್ರಕರಣದ ತನಿಖೆಗಾಗಿ ಜಿಲ್ಲೆಯ 9 ಪೊಲೀಸ್ ಅಧಿಕಾರಿಗಳನ್ನು ಎಡಿಜಿಪಿ ಡಾ.ಎಮ್.ಎ.ಸಲೀಂ ಐಪಿಸ್ ಅವರು ನೇಮಕ ಮಾಡಿ  ಆದೇಶ ಹೊರಡಿಸಿದ್ದು ತಕ್ಷಣದಿಂದಲೇ ಬೆಂಗಳೂರಿನ ಎನ್ಐಎ ಕಛೇರಿಗೆ ವರದಿ ಮಾಡಿಕೊಳ್ಳಲು ತಿಳಿಸಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರಸನ್ನ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಉದಯ ರವಿ, ವೇಣೂರು ಠಾಣೆಯ ಹೆಡ್ ಕಾನ್ಟೇಬಲ್ ಪ್ರವೀಣ್.ಎಮ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಟೇಬಲ್ ಪ್ರವೀಣ್ ರೈ ಮತ್ತು ಆದ್ರಾಮ, ವಿಟ್ಲ ಪೊಲೀಸ್ ಠಾಣೆಯ ಹೆಡ್ ಕಾನ್ಟೇಬಲ್ ಉದಯ ರೈ , ಬಂಟ್ವಾಳ ಸಂಚಾರಿ ಠಾಣೆಯ ವಿವೇಕ್ ರೈ ಮತ್ತು ಕುಮಾರ್, ಸುಳ್ಯ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅನಿಲ್ ಇವರನ್ನು ಒಳಗೊಂಡ ಪೋಲಿಸರ ತಂಡವನ್ನು ಒಂದು ತಿಂಗಳವರೆಗೆ ಎನ್ಐಎ ಗೆ ಒಒಡಿ ಮೂಲಕ ನೇಮಕ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ