-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನಕ್ಕೆ ಪರೇಶ್ ಮೇಸ್ತ ಹತ್ಯೆ ಆರೋಪಿ: ಟೀಕೆಗೊಳಗಾದ ಬಿಜೆಪಿ

ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನಕ್ಕೆ ಪರೇಶ್ ಮೇಸ್ತ ಹತ್ಯೆ ಆರೋಪಿ: ಟೀಕೆಗೊಳಗಾದ ಬಿಜೆಪಿ

ಉತ್ತರ ಕನ್ನಡ: ಹೊನ್ನಾವರದಲ್ಲಿ 2017ರಲ್ಲಿ ನಡೆದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಕೊಲೆ ಪ್ರಕರಣ ಅಂದು ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ಟೀಕೆಗೊಳಗಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪರೇಶ್ ಮೇಸ್ತನನ್ನು ಹತ್ಯೆಗೈದ ಪ್ರಮುಖ ಆರೋಪಿ ಅಝಾದ್ ಅಣ್ಣಿಗೇರಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಬಿಜೆಪಿಯ ಅಧಿಕಾರದ ಅವಧಿಯಲ್ಲಿಯೇ ಈ ಸ್ಥಾನ ದೊರಕಿರುವುದು ಭಾರೀ ಟೀಕೆಗೆ ಕಾರಣವಾಗಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ. ಅಲ್ಲದೆ ಕೆಲ ಬಿಜೆಪಿಗರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಟೀಕೆ, ಅಸಮಾಧಾನ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಪದಾಧಿಕಾರಿಗಳನ್ನು ಬದಲಿಸುವಂತೆ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷ ಅನೀಶ್ ತಹಶಿಲ್ದಾರ್ ಸಚಿವರಿಗೆ ಪತ್ರ ಬರೆದಿದ್ದಾರೆ.

 

Ads on article

Advertise in articles 1

advertising articles 2

Advertise under the article

ಸುರ