-->

ಗಣೇಶ ವಿಸರ್ಜನೆಯಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ: ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್

ಗಣೇಶ ವಿಸರ್ಜನೆಯಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ: ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್

ಬೆಳಗಾವಿ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ವಾಗ್ವಾದವೊಂದು ಯುವಕನ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.

ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನ ಗೌಡ ಪಾಟೀಲ್ ( 20 ) ಹತ್ಯೆಯಾದ ಯುವಕ. ಓರ್ವ ಅಪ್ರಾಪ್ತ ಸೇರಿದಂತೆ ಉದಯ ಭಂಡೋಲಿ (21) , ಸುಭಾಷ ಸೋಲಣ್ಣವರ (21) ವಿಠಲ ಮೀಶಿ (20) ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿ ಅರ್ಜುನಗೌಡ ಪಾಟೀಲ್ ಗೆ ಚೂರಿ ಇರಿತವಾಗಿದೆ. ಅರ್ಜುನ ಗೌಡ ಕುಸಿದು ಬೀಳ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಇವರೊಳಗಿನ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. 

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article