-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಗಣೇಶ ವಿಸರ್ಜನೆಯಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ: ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್

ಗಣೇಶ ವಿಸರ್ಜನೆಯಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ: ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್

ಬೆಳಗಾವಿ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ನಡೆದ ವಾಗ್ವಾದವೊಂದು ಯುವಕನ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.

ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನ ಗೌಡ ಪಾಟೀಲ್ ( 20 ) ಹತ್ಯೆಯಾದ ಯುವಕ. ಓರ್ವ ಅಪ್ರಾಪ್ತ ಸೇರಿದಂತೆ ಉದಯ ಭಂಡೋಲಿ (21) , ಸುಭಾಷ ಸೋಲಣ್ಣವರ (21) ವಿಠಲ ಮೀಶಿ (20) ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಜಗಳ ಉಂಟಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿ ಅರ್ಜುನಗೌಡ ಪಾಟೀಲ್ ಗೆ ಚೂರಿ ಇರಿತವಾಗಿದೆ. ಅರ್ಜುನ ಗೌಡ ಕುಸಿದು ಬೀಳ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಇಂದು ಬೆಳಗ್ಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಕಾಲೇಜು ವಿದ್ಯಾರ್ಥಿಗಳಾಗಿದ್ದು, ಇವರೊಳಗಿನ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. 

Ads on article

Advertise in articles 1

advertising articles 2

Advertise under the article