-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತಾಯಿಗೆ ಹಲ್ಲೆಗೈದು, ಜಗಳಕ್ಕೆ ನಿಂತ ತಂದೆಯನ್ನೇ ಹತ್ಯೆ ಮಾಡಿದ ಪುತ್ರ

ತಾಯಿಗೆ ಹಲ್ಲೆಗೈದು, ಜಗಳಕ್ಕೆ ನಿಂತ ತಂದೆಯನ್ನೇ ಹತ್ಯೆ ಮಾಡಿದ ಪುತ್ರ

ಬೆಳಗಾವಿ: ತಂದೆಯಿಂದ ಹಲ್ಲೆಗೊಳಗಾದ ತಾಯಿಯ ಚಿಕಿತ್ಸೆಗೆ ಮುಂದಾದ ಪುತ್ರನೊಂದಿಗೆ ಖ್ಯಾತೆ ತೆಗೆದ ತಂದೆಯನ್ನೇ ಪುತ್ರನೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯಮಾರ್ಗದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. 

ಬೆಂಗಳೂರಿನ ಬಿಎಂಟಿಸಿ ಚಾಲಕನಾಗಿದ್ದ ರುದ್ರಪ್ಪ ತಳವಾರ ( 55 ) ಮೃತಪಟ್ಟವರು. ಪುತ್ರ ಸಂತೋಷ್ ಕೊಲೆ ಆರೋಪಿ.

ರುದ್ರಪ್ಪ ತಳವಾರ ಹಾಗೂ ಪತ್ನಿ ಮಲ್ಲೂರ ಗ್ರಾಮದ ಖಾಸಗಿ ಶಾಲೆಯ ಶಿಕ್ಷಕಿ ಮಹಾದೇವಿ ( 50 ) ನಡುವೆ ಯಾವುದೋ ಕಾರಣಕ್ಕೆ ಜಗಳ ನಡೆದಿದೆ. ಈ ವೇಳೆ ರುದ್ರಪ್ಪ ತಳವಾರ ಮಹಾದೇವಿಗೆ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ಆಕೆಯ ಕಣ್ಣಿನ ಭಾಗದಲ್ಲಿ ಬಲವಾದ ಗಾಯವಾಗಿತ್ತು. ಆದ್ದರಿಂದ ಪುತ್ರ ಸಂತೋಷ್ ಇಬ್ಬರ ಜಗಳ ಬಿಡಿಸಿ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ.

ತನ್ನ ಬಳಿಯಲ್ಲಿದ್ದ ಹಣದಲ್ಲಿ ಔಷಧೋಪಚಾರ ಮಾಡಿಸಿ , ಸ್ಕ್ಯಾನಿಂಗ್‌ಗಾಗಿ ಮನೆಗೆ ಹಣ ತರಲು ಸಂತೋಷ್ ಬಂದಿರುವ ವೇಳೆ, ರುದ್ರಪ್ಪ ತಳವಾರ ಮದ್ಯದ ಮತ್ತಿನಲ್ಲಿ ಆಕೆ ಚಿಕಿತ್ಸೆ ಕೊಡದಿರುವಂತೆ ಜಗಳವಾಡಿದ್ದಾನೆ. ತಂದೆ ಹಾಗೂ ಪುತ್ರನ ಮಧ್ಯೆ ಮಾತಿಗೆ ಮಾತು ಬೆಳೆದು ಇಬ್ಬರು ಕೈ , ಕೈ ಮಿಲಾಯಿಸಿ ಜಗಳವಾಡಿದ್ದಾರೆ. ಸಿಟ್ಟಿನ ಭರದಲ್ಲಿ ಸಂತೋಷ್ ಮಚ್ಚಿನಿಂದ ತಂದೆ ರುದ್ರಪ್ಪನ ಕುತ್ತಿಗೆ , ಕಣ್ಣಿಗೆ ಏಟು ಹಾಕಿದ್ದರಿಂದ ಸ್ಥಳದಲ್ಲೇ ರುದ್ರಪ್ಪ ಮೃತಪಟ್ಟಿದ್ದಾನೆ . ಆರೋಪಿ ಸಂತೋಷನನ್ನು ಬಂಧಿಸಲಾಗಿದೆ . ಸ್ಥಳಕ್ಕೆ ಡಿವೈಎಸ್‌ಪಿ ಶಿವಾನಂದ ಕಟಗಿ , ಸಿಪಿಐ ಉಳವಪ್ಪ ಸಾತೆನಹಳ್ಳಿ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ