-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಬೆಳ್ಳಂಬೆಳಗ್ಗೆಎಸ್ ಡಿಪಿಐ, ಪಿಎಫ್ಐ ಕಚೇರಿಗೆ ಎನ್ಐಎ ದಾಳಿ; ಮಹತ್ವದ ದಾಖಲೆಗಳು ವಶಕ್ಕೆ

ಮಂಗಳೂರು: ಬೆಳ್ಳಂಬೆಳಗ್ಗೆಎಸ್ ಡಿಪಿಐ, ಪಿಎಫ್ಐ ಕಚೇರಿಗೆ ಎನ್ಐಎ ದಾಳಿ; ಮಹತ್ವದ ದಾಖಲೆಗಳು ವಶಕ್ಕೆ

ಮಂಗಳೂರು: ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ, ಎಸ್ ಡಿ ಪಿ ಐ ಕಚೇರಿ ಮೇಲೆ ಎನ್ಐಎ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ.









ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಎನ್ಐಎ ದಾಳಿ ನಡೆಸಿದ್ದು, ದಾಳಿಯ ವೇಳೆ ನೆಲ್ಲಿಕಾಯಿ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ದಾಳಿಯ ವೇಳೆ 200 ಕ್ಕೂ ಅಧಿಕ ಮಂದಿ ಕಾರ್ಯಕರ್ತರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು 50 ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ದಾಳಿ ಅಂತ್ಯಗೊಂಡ ಬಳಿಕ ಹಲವು ಮಹತ್ವದ ದಾಖಲೆಗಳು, ಕಡತಗಳು, ಲ್ಯಾಪ್‌ಟಾಪ್ ಗಳೊಂದಿಗೆ ಎನ್ಐಎ ಅಧಿಕಾರಿಗಳು ಮರಳಿದ್ದಾರೆ.

ದಾಳಿಯ ಬಗ್ಗೆ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಪ್ರತಿಕ್ರಿಯಿಸಿ, ಎನ್ಐಎ ತಂಡ ಪಿಎಫ್ಐ ಕಚೇರಿಗೆ ದಾಳಿ ನಡೆಸಿದೆ.  ಆದರೆ ಅವರಿಗೆ ತಿಳಿಯದೆ ಎಸ್ ಡಿಪಿಐ ಕಚೇರಿಗೆ ದಾಳಿ ನಡೆಸಿದ್ದಾರೆ. ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ ಡಿಪಿಐ ಕಚೇರಿಯಿರುವ ಕಟ್ಟಡದ ಮೇಲ್ಗಡೆ ಪಿಎಫ್ಐ ಕಚೇರಿಯಿದೆ‌. ಆ ಬಳಿಕ ಎರಡೂ ಕಚೇರಿಗಳನ್ನು ಪರಿಶೀಲನೆ ಮಾಡಿದ್ದಾರೆ.

ನಮ್ಮ ಲ್ಯಾಪ್‌ಟಾಪ್, ಕೆಲವೊಂದು ದಾಖಲೆಗಳನ್ನು ದಾಳಿ ವೇಳೆ ಎನ್ಐಎ ವಶಕ್ಕೆ ತೆಗೆದುಕೊಂಡಿದೆ. ನಮ್ಮನ್ನು ಯಾವುದೇ ರೀತಿ ವಿಚಾರಣೆ ಮಾಡಿಲ್ಲ. ನಮ್ಮ ಕಪಾಟುಗಳನ್ನು ಸಂಪೂರ್ಣ ಪರಿಶೀಲನೆ ಮಾಡಿದ್ದಾರೆ. ಯಾವ ಕಾರಣಕ್ಕೆ ಈ ದಾಳಿ ನಡೆಸಿದೆ ಎಂದು ಎನ್ಐಎ ತಂಡ ತಿಳಿಸಿಲ್ಲ. ಆದರೆ ನಾವು ರಾಜಕೀಯವಾಗಿ ಬೆಳವಣಿಗೆ ಆಗುತ್ತಿದ್ದೇವೆ  ಎಂಬ ಕುತಂತ್ರದಿಂದ ಬಿಜೆಪಿ ಈ ದಾಳಿಯನ್ನು ನಡೆಸಿದೆ ಎಂದರು.

Ads on article

Advertise in articles 1

advertising articles 2

Advertise under the article

ಸುರ