-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಲಪ್ಪುರಂ: ರಸ್ತೆ ಹೊಂಡಗಳ ಮಧ್ಯೆಯೇ ವೆಡ್ಡಿಂಗ್ ಫೋಟೋಶೂಟ್: ನೆಟ್ಟಿಗರಿಂದ ಶಹಬ್ಬಾಸ್ ಎನಿಸಿಕೊಂಡ ವಧು

ಮಲಪ್ಪುರಂ: ರಸ್ತೆ ಹೊಂಡಗಳ ಮಧ್ಯೆಯೇ ವೆಡ್ಡಿಂಗ್ ಫೋಟೋಶೂಟ್: ನೆಟ್ಟಿಗರಿಂದ ಶಹಬ್ಬಾಸ್ ಎನಿಸಿಕೊಂಡ ವಧು

ಮಲಪ್ಪುರಂ: ವಿವಾಹದ ಸಂದರ್ಭದಲ್ಲಿ ಪ್ರೀ ವೆಡ್ಡಿಂಗ್ ಅಥವಾ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನವ ಜೋಡಿಯ ಅವಿಭಾಜ್ಯ ಅಂಗ. ಬಹುತೇಕರು ತಮ್ಮ ವೆಡ್ಡಿಂಗ್ ಫೋಟೋಗಳು ಬಹಳ ವಿಭಿನ್ನವಾಗಿರಬೇಕೆಂದು ಅಂದು ಕೊಂಡಿರುತ್ತಾರೆ. ಹಾಗಾಗಿ ಬಹಳ ಸುಂದರ ತಾಣಗಳಲ್ಲಿ ಫೋಟೊಶೂಟ್ ಮಾಡಿಕೊಳ್ಳುತ್ತಾರೆ. ಆದರೆ , ಕೇರಳದ ವಧುವೊಬ್ಬರು ತಮ್ಮ ವೆಡ್ಡಿಂಗ್ ಫೋಟೋಶೂಟ್ ಮಾಡುವ ಮೂಲಕ ಸರ್ಕಾರದ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. 

ಹೌದು, ಮಲಪ್ಪುರಂ ಜಿಲ್ಲೆಯ ನೀಲಂಬುರ್ ಪಟ್ಟಣದಲ್ಲಿ ರಸ್ತೆ ಸಂಪೂರ್ಣ ಹೊಂಡಮಯವಾಗಿತ್ತು. ರಸ್ತೆಯ ಈ ಶೋಚನಿಯ ಸ್ಥಿತಿಯನ್ನು ಸರ್ಕಾರಕ್ಕೆ ಮನವರಿಕೆ ಮಾಡಬೇಕೆಂಬ ಉದ್ದೇಶದಿಂದ ಪೂಕೊಟ್ಟುಂಪದಂ ಮೂಲದ ಸುಜೀಶಾ ಎಂಬವರು ರಸ್ತೆ ಗುಂಡಿಗಳ ನಡುವೆಯೇ ವೆಡ್ಡಿಂಗ ಫೋಟೋಶೂಟ್ ಮಾಡಿಸಿದ್ದಾರೆ. ನೀಲಂಬುರ್‌ನಲ್ಲಿರುವ ಆ್ಯರೋ ವೆಡ್ಡಿಂಗ್ ಕಂಪನಿ ಈ ಫೋಟೋಶೂಟ್ ಮಾಡಿದೆ. ರಸ್ತೆಯು ಗುಂಡಿಮಯವಾಗಿದ್ದು, ಗುಂಡಿಗಳಲ್ಲಿ ನೀರು ತುಂಬಿ ಸವಾರರು ಬಹುದಿನಗಳಿಂದ ಪರದಾಡುತ್ತಿದ್ದರು. 

ಆದ್ದರಿಂದ ಸಂಪೂರ್ಣ ಹದಗೆಟ್ಟ ರಸ್ತೆಯಲ್ಲಿಯೇ ಫೋಟೋಶೂಟ್ ನಡೆಸುವುದು ಅಧಿಕಾರಿಗಳ ನಿಷ್ಕ್ರಿಯತೆಯ ವಿರುದ್ಧ ಪ್ರತಿಭಟಿಸುವ ಒಂದು ಸಾಧನವಾಗಿದೆ ಎಂದು ಛಾಯಾಗ್ರಾಹಕ ಆಶಿಕ್ ಹೇಳಿದ್ದಾರೆ. ಈ ಯೋಜನೆಯನ್ನು ವಧುವಿಗೆ ಸೂಚಿಸಿದಾಗ, ಅವರು ಸಹ ಒಪ್ಪಿಗೆ ನೀಡಿದರು ಎಂದು ಆಶಿಕ್ ತಿಳಿಸಿದರು. ಈ ಫೋಟೋಗಳು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಆಗಿದ್ದು, ವಧುವಿಗೆ ನೆಟ್ಟಿಗರು ಬಹುಪರಾಕ್ ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ