-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹತ್ತನೇ ತರಗತಿ ಓದುತ್ತಿದ್ದಾಗ ಪುತ್ತೂರಿನ ಈ ಬಾಲಕ ರಚಿಸಿದ ಆಂಗ್ಲ ಕವನ ಇದೀಗ 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಸೇರ್ಪಡೆ..!!

ಹತ್ತನೇ ತರಗತಿ ಓದುತ್ತಿದ್ದಾಗ ಪುತ್ತೂರಿನ ಈ ಬಾಲಕ ರಚಿಸಿದ ಆಂಗ್ಲ ಕವನ ಇದೀಗ 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಸೇರ್ಪಡೆ..!!


ಪುತ್ತೂರು: ಬಾಲಕನೊಬ್ಬ ಹತ್ತನೇ ತರಗತಿ ಓದುತ್ತಿರುವಾಗ ರಚಿಸಿದ ಆಂಗ್ಲ ಕವನ ಇದೀಗ 8ನೇ ತರಗತಿಯ ಪಠ್ಯ ಪುಸ್ತಕದಲ್ಲಿ ಸೇರ್ಪಡೆಯಾಗಿದೆ.

ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ದಿವಿತ್​ ಯು. ರೈ ಎಂಬುವವರು ಈ ಆಂಗ್ಲ ಕವನ ರಚಿಸಿದ ಬಾಲಕ.ಈತ‌ 
ಉದಯ ಕುಮಾರ್​ ರೈ ನೀಲಂಪಾಡಿ ಮತ್ತು ಪ್ರತಿಮಾ ಯು.ರೈ ದಂಪತಿ ಪುತ್ರ.

 ಸದ್ಯ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಎರಡನೇ ವರ್ಷದ ಬಿಇ ​ವಿದ್ಯಾರ್ಥಿ. 4 ವರ್ಷದ ಹಿಂದೆ ಅಂದರೆ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವಾಗ ದಿವಿತ್​ ರಚನೆಯ 'ಸಿಂಪಲ್​ ಲೈಫ್​' ಎಂಬ ಆಂಗ್ಲ ಕವನ ಸಂಕಲನ ಬಿಡುಗಡೆಯಾಗಿತ್ತು. ಆ ಕೃತಿಯ 'ಮದರ್​ ಅರ್ಥ್​' ಕವನವನ್ನು ರಾಜ್ಯ ಸರ್ಕಾರ ಈ ಬಾರಿಯ 8ನೇ ತರಗತಿಯ ಕಲಿಕಾ ಚೇತರಿಕೆ ಪಠ್ಯದಲ್ಲಿ ಅಳವಡಿಸಿದೆ.

ದಿವಿತ್​ ಪುತ್ತೂರಿನ ಹಾರಾಡಿ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಕಲಿಯುತ್ತಿದ್ದ ವೇಳೆ 'ಡ್ಯೂ ಡ್ರಾಪ್ಸ್​' ಎಂಬ ಆಂಗ್ಲ ಕವನ ಸಂಕಲನ ರಚಿಸಿ ಬಿಡುಗಡೆಗೊಳಿಸಿದ್ದರು.


Ads on article

Advertise in articles 1

advertising articles 2

Advertise under the article

ಸುರ