ಮಂಗಳೂರು: ಪ್ರತಿಭಾ ಕುಳಾಯಿಯವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪಿ‌ ಕೆ.ಆರ್.ಶೆಟ್ಟಿ ನ್ಯಾಯಾಲಯದ ಮುಂದೆ ಹಾಜರು

ಮಂಗಳೂರು: ಪ್ರತಿಭಾ ಕುಳಾಯಿಯವರ ಬಗ್ಗೆ ಜಾಲತಾಣದಲ್ಲಿ ಅವಾಚ್ಯವಾಗಿ ನಿಂದಿಸಿರುವ ಪ್ರಕರಣದ ಎರಡನೇ ಆರೋಪಿ ಕೆ.ಆರ್.ಶೆಟ್ಟಿ ಎಂಬಾತ ತನ್ನ ವಕೀಲರೊಂದಿಗೆ ಕೋರ್ಟ್ ಗೆ ಹಾಜರಾಗಿದ್ದಾನೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯವರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿದ್ದಾರೆ. ನ್ಯಾಯಾಲಯದ ಆದೇಶವನ್ನು ಎದುರು ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.