-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಕೀಟನಾಶಕ ಸಿಂಪಡಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ಮೂವರು ರೈತರು ಸ್ಥಳದಲ್ಲಿಯೇ ದುರ್ಮರಣ

ಕೀಟನಾಶಕ ಸಿಂಪಡಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ಮೂವರು ರೈತರು ಸ್ಥಳದಲ್ಲಿಯೇ ದುರ್ಮರಣ

ತಿರುಪತಿ: ಹೊಲದಲ್ಲಿ ಕೀಟನಾಶಕ ಸಿಂಪಡಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಮೂವರು ರೈತರು ಸ್ಥಳದಲ್ಲಿಯೇ ದುರ್ಮರಣಕ್ಕೀಡಾದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಚಾಪಡು ಮಂಡಲ ಚಿಯ್ಯಪಡು ಎಂಬಲ್ಲಿ ಶುಕ್ರವಾರ ನಡೆದಿದೆ.

ಪೆದ್ದಿರೆಡ್ಡಿ ಓಬಳ ರೆಡ್ಡಿ(65) , ಪೆದ್ದಿರೆಡ್ಡಿ ಬಾಲ ಓಬಳ ರೆಡ್ಡಿ (60) ಮತ್ತು ಬಿ.ಮಲ್ಲಿಕಾರ್ಜುನ ರೆಡ್ಡಿ (23) ಮೃತಪಟ್ಟ ದುರ್ದೈವಿಗಳು. 

ತಿರುಪತಿ ಗ್ರಾಮಕ್ಕೆ ಸಮೀಪದಲ್ಲಿರುವ ತಮ್ಮ ಹೊಲದಲ್ಲಿ ಈ ರೈತರು ಕೀಟನಾಶಕವನ್ನು ಸಿಂಪಡಿಸುತ್ತಿದ್ದ ವೇಳೆ, ಒಬ್ಬ ರೈತನಿಗೆ ಅತ್ಯಂತ ಕೆಳಮಟ್ಟದಲ್ಲಿ ನೇತಾಡುತ್ತಿದ್ದ ವಿದ್ಯುತ್ ಕೇಬಲ್ ತಗುಲಿದೆ. ಇದನ್ನು ಕಂಡ ಮತ್ತಿಬ್ಬರು ಕೂಡಾ ಆತನಿಗೆ ನೆರವು ನೀಡಲು ಮುಂದಾಗಿದ್ದಾರೆ. ಆಗ ಅವರಿಗೂ ವಿದ್ಯುತ್ ಸ್ಪರ್ಶವಾಗಿ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ . 

ಇದನ್ನು ಗಮನಿಸಿದ ಸ್ಥಳೀಯ ರೈತರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ರೈತರನ್ನು ಚಿಕಿತ್ಸೆಗಾಗಿ ರವಾನಿಸಿದ್ದಾರೆ. ಆದರೆ ವೈದ್ಯರು ಈ ಮೂವರು ರೈತರೂ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ