-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ದೀಪಾವಳಿಗೆ ಉದ್ಯೋಗಿಗಳಿಗೆ ಕಾರು, ಬೈಕ್ ಗಳನ್ನು ಉಡುಗೊರೆ ನೀಡಿದ ಜ್ಯುವೆಲ್ಲರಿ ಮಾಲಕ

ದೀಪಾವಳಿಗೆ ಉದ್ಯೋಗಿಗಳಿಗೆ ಕಾರು, ಬೈಕ್ ಗಳನ್ನು ಉಡುಗೊರೆ ನೀಡಿದ ಜ್ಯುವೆಲ್ಲರಿ ಮಾಲಕ

ಚೆನ್ನೈ: ಚೆನ್ನೈನ ಚಿನ್ನಾಭರಣ ಮಳಿಗೆಯ ಮಾಲಕರಾಗಿರುವ ಜಯಂತಿ ಲಾಲ್ ಚಲ್ಲನಿ  ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಭರ್ಜರಿ ಉಡುಗೊರೆ ನೀಡಿದ್ದಾರೆ‌. ಈ ಕಂಪೆನಿಯ 8ಮಂದಿ ಉದ್ಯೋಗಿಗಳಿಗೆ ಕಾರುಗಳು ಮತ್ತು 19 ಮಂದಿಗೆ ಬೈಕ್‌ಗಳನ್ನು ನೀಡಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ವೇಳೆ ತಮ್ಮ ಉದ್ಯಮಕ್ಕೆ ಅವಿರತ ಬೆಂಬಲ ನೀಡಿರುವುದನ್ನು ಗಮನದಲ್ಲಿರಿಸಿಕೊಂಡು ಈ ಕೊಡುಗೆ ನೀಡಿರುವುದಾಗಿ ಚಲ್ಲನಿ ಹೇಳಿದ್ದಾರೆ. ಚಿನ್ನಾಭರಣಗಳ ಮಳಿಗೆಯ ಮಾಲಕರೊಬ್ಬರು ತಮ್ಮ ಉದ್ಯೋಗಿಗಳಿಗೆ ಕಾರು, ಬೈಕ್‌ಗಳನ್ನು ಉಡುಗೊರೆಯಾಗಿ ನೀಡಿರುವುದು ಭಾರತದಲ್ಲಿ ಇದೇ ಮೊದಲ ಬಾರಿ ಎಂದು ಸಂಸ್ಥೆಯ ಪ್ರಚಾರ ಮತ್ತು ಮಾರ್ಕೆಟಿಂಗ್ ವಿಭಾಗದ ಸಹಾಯಕ ಜನರಲ್ ಮ್ಯಾನೇಜರ್ ಎಸ್ ಬಾಲಾಜಿ ಹೇಳಿದ್ದಾರೆ . 

ನಗದು ಉಡುಗೊರೆ ನೀಡಿದರೆ ಒಂದೆರಡು ತಿಂಗಳಿನಲ್ಲಿ ಖರ್ಚಾಗಿ ಹೋಗುತ್ತದೆ ಎಂದು ವಾಹನಗಳನ್ನು ಉಡುಗೊರೆಯಾಗಿ ನೀಡಲಾಯಿತು. ಅವರು ಈ ಉಡುಗೊರೆ ವಿಚಾರ ತಮಗೂ, ಯಾರಿಗೂ ಕೊನೇ ಕ್ಷಣದ ತನಕ ತಿಳಿದಿರಲಿಲ್ಲ. ಉಡುಗೊರೆ ಪಡೆದ ಉದ್ಯೋಗಿಗಳು ಸಂತೋಷ ತಾಳಲಾರದೆ ಆನಂದಬಾಷ್ಪ ಸುರಿಸಿದರು ಎಂದು ಅವರು ಹೇಳಿದರು.

Ads on article

Advertise in articles 1

advertising articles 2

Advertise under the article

ಸುರ