-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Kadaba:- ರೈಲು ಇಂಜಿನ್ ಡಿಕ್ಕಿಯಾಗಿ ವ್ಯಕ್ತಿ ಗಂಭೀರ..

Kadaba:- ರೈಲು ಇಂಜಿನ್ ಡಿಕ್ಕಿಯಾಗಿ ವ್ಯಕ್ತಿ ಗಂಭೀರ..

ಕಡಬ

ಇಲ್ಲಿನ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣದ ಬಳಿ ರೈಲು ಇಂಜಿನ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ಮದ್ಯಾಹ್ನ ನೆಟ್ಟಣದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಐತ್ತೂರು ಗ್ರಾಮದ ಓಟೆಕಜೆ  ನಾಗಣ್ಣ ಎಂದು ಗುರುತಿಸಲಾಗಿದೆ. ರೈಲು ಇಂಜಿನ್ ಡಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ನಡೆದಿದ್ದ ತನ್ನ ಮಗಳು ಭಾಗವಹಿಸಿದ್ದ ಕ್ರೀಡಾಕೂಟಕ್ಕೆ ತೆರಳಿ ನೆಟ್ಟಣ ರೈಲು ನಿಲ್ದಾಣದಲ್ಲಿ ತಮ್ಮ ಸತೀಶ ಓಟೆಕಜೆ ಎಂಬವರ ಜೊತೆ ಬಂದಿಳಿದಿದ್ದರು.  ಬಳಿಕ ಅಡ್ಡ ದಾರಿ ಮೂಲಕ ಮನೆಯತ್ತ ತೆರಳಲು ನಿಲ್ದಾಣದ ಸಮೀಪದಲ್ಲೇ ರೈಲು ಹಳಿ ದಾಟುತ್ತಿದ್ದಾಗ ಏಕಾಏಕಿ ರೈಲು ಇಂಜಿನ್ ಬಂದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಒಂದು ಕೈ ಮತ್ತು ಕಾಲು ನಷ್ಟವಾಗಿ ರೈಲ್ವೆ ಹಳಿ ಬದಿಗೆ ಎಸೆಯಲ್ಪಟ್ಟು ಗಂಭೀರ ಗಾಯದೊಂದಿಗೆ ಸಾವಿನ ದವಡೆಯಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Ads on article

Advertise in articles 1

advertising articles 2

Advertise under the article

ಸುರ