-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಚಾಲನೆಯಲ್ಲಿದ್ದ ಕಾರಿನಲ್ಲಿಯೇ ಪಟಾಕಿ ಸಿಡಿಸಿದ ಆರೋಪಿ ಮೇಲೆ ಪ್ರಕರಣ ದಾಖಲು: ಕಾರು ವಶಕ್ಕೆ

ಚಾಲನೆಯಲ್ಲಿದ್ದ ಕಾರಿನಲ್ಲಿಯೇ ಪಟಾಕಿ ಸಿಡಿಸಿದ ಆರೋಪಿ ಮೇಲೆ ಪ್ರಕರಣ ದಾಖಲು: ಕಾರು ವಶಕ್ಕೆ

ಉಡುಪಿ: ಇಲ್ಲಿನ ಮಣಿಪಾಲದ ಡಾ.ವಿ.ಎಸ್.ಆಚಾರ್ಯ ರಸ್ತೆಯಲ್ಲಿ ಅ.25ರ ರಾತ್ರಿ ಕಾರಿನ ಮೇಲೆ ಪಟಾಕಿಯನ್ನು ಸಿಡಿಸಿ ಅಪಾಯವಾಗುವ ರೀತಿಯ ಕಾರು ಚಲಾಯಿಸಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಣಿಪಾಲ ಪೊಲೀಸರು ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. 

ಅಪಾಯಕಾರಿ ರೀತಿಯಲ್ಲಿ ಕಾರು ಚಲಾಯಿಸಿದಾತ ವಿಶಾಲ್ ಕೊಹ್ಲಿ(26) ಎಂದು ಗುರುತಿಸಲಾಗಿದೆ. 

ಮಣಿಪಾಲದ ವಿ.ಪಿ.ನಗರದಲ್ಲಿ ವಾಸವಾಗಿರುವ ವಿಶಾಲ್ ಕೊಹ್ಲಿ ಸೆಲೂನ್ ಒಂದರಲ್ಲಿ ಕೆಲಸ ಮಾಡುತಿದ್ದಾನೆ ಎಂದು ತಿಳಿದುಬಂದಿದೆ. ಅ.25ರ ಮಂಗಳವಾರ ರಾತ್ರಿ 9.30ರ ಸುಮಾರಿಗೆ ಮಣಿಪಾಲದ ಶಿವಳ್ಳಿ ಗ್ರಾಮದ ಡಾ.ವಿ.ಎಸ್.ಆಚಾರ್ಯ ರಸ್ತೆಯಲ್ಲಿ ನಿರ್ಲಕ್ಷ್ಯತನ, ಅಜಾಗರೂಕತೆ ಹಾಗೂ ಅಪಾಯಕಾರಿ ರೀತಿಯಲ್ಲಿ ಕಾರಿನ ಮೇಲೆ ಪಟಾಕಿ ಇಟ್ಟು ಸಿಡಿಸುತ್ತಾ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾನೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಬಿತ್ತರಗೊಂಡಿದ್ದು, ವೈರಲ್ ಆಗಿತ್ತು.

ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕಿ ಅವರ ಮಾರ್ಗದರ್ಶನದಂತೆ ಮಣಿಪಾಲ ಪೊಲೀಸ್ ಠಾಣಾ ಪಿಎಸ್‌ಐ ರಾಜಶೇಖರ್ ವಂದಲಿ , ಎಎಸ್ಸೆ ಶೈಲೇಶ್ ಕುಮಾರ್ ಹಾಗೂ ಹೆಡ್‌ಕಾನ್‌ಸ್ಟೇಬಲ್ ಪ್ರಸನ್ನ ಅವರು ಸಂಬಂಧಿತ ಕಾರು ಹಾಗೂ ಚಾಲಕ ವಿಶಾಲ್ ಕೊಹ್ಲಿಯನ್ನು ಸಿಂಡಿಕೇಟ್ ವೃತ್ತದ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಪಿಎಸ್‌ಐ ರಾಜಶೇಖರ ವಂದಲಿ ಅವರ ಸ್ವದೂರಿನ ಮೇಲೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

ಸುರ