-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಆತ್ಮಹತ್ಯೆಗೈದಿರುವ ಸ್ಥಿತಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ಆತ್ಮಹತ್ಯೆಗೈದಿರುವ ಸ್ಥಿತಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ನಗರದ ಮರೋಳಿಯಲ್ಲಿರುವ ತಮ್ಮ ನಿವಾಸದಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ದಾರುಣ ಘಟನೆಯೊಂದು ಸೋಮವಾರ ನಡೆದಿದೆ.

ಬೆಳಗಾವಿ ಮೂಲದ ಮಲ್ಲಿಕಾರ್ಜುನ ಬಸವರಾಜ ಕೊಪ್ಪದ್ (34) ಮತ್ತು ಬಿಕರ್ನಕಟ್ಟೆ ಸೌಮ್ಯ ನಾಯಕ್ (35) ಆತ್ಮಹತ್ಯೆಗೆ ಶರಣಾದ ದಂಪತಿ.

ಒಂದೂವರೆ ವರ್ಷದ ಹಿಂದೆ ಇಬ್ಬರೂ ವಿವಾಹವಾಗಿದ್ದರು. ಬಳಿಕ ಅವರು ಮರೋಳಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ವಾಸವಿದ್ದರು. ದಂಪತಿ ಎರಡು ದಿನಗಳ ಹಿಂದೆಯಷ್ಟೇ ಮಡಿಕೇರಿಗೆ ಪ್ರವಾಸ ಹೋಗಿ ಮನೆಗೆ ವಾಪಸ್ ಆಗಿದ್ದರು ಎಂದು ತಿಳಿದು ಬಂದಿದೆ. ಆದರೆ ಇಂದು ಅವರಿಬ್ಬರ ಮೃತದೇಹ ಸ್ವಗೃಹದಲ್ಲಿ ಆತ್ಮಹತ್ಯೆಗೈದಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಂಕನಾಡಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ