-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
 ಅಂಬೇಡ್ಕರ್ ಚಿಂತನೆ ಪಾಲಿಸಿದರೆ ಬದುಕು ಹಸನು: ಡಾ.ಶ್ರೀನಿವಾಸ್ ಹೊಡೆಯಾಲ

ಅಂಬೇಡ್ಕರ್ ಚಿಂತನೆ ಪಾಲಿಸಿದರೆ ಬದುಕು ಹಸನು: ಡಾ.ಶ್ರೀನಿವಾಸ್ ಹೊಡೆಯಾಲ

 




ಮೂಡುಬಿದಿರೆ: ಪ್ರಪಂಚದ ಬಹುತೇಕ ದೇಶಗಳ ಸಂವಿಧಾದಲ್ಲಿ ಮೂಲಭೂತ ಹಕ್ಕು ಇದೆ. ಆದರೆ ನಮ್ಮ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳೊಂದಿಗೆ ಸಮಾನವಾಗಿ ಬದುಕುವ ಹಕ್ಕಿದೆ ಎಂದು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ.ಶ್ರೀನಿವಾಸ್ ಹೊಡೆಯಾಲ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ,  ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ "ಅಂಬೇಡ್ಕರ್ ಓದು" ಉಪನ್ಯಾಸ ಕರ‍್ಯಕ್ರಮ ಕಾಮರ್ಸ್ ಹಾಲ್ ನಲ್ಲಿ ನಡೆಯಿತು.



ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು ಸಂವಿಧಾನ ಬರುವ ಮೊದಲು ಮತದಾನ ಮಾಡುವ ಹಕ್ಕು ಎಲ್ಲರಿಗೂ ಇರಲಿಲ್ಲ. ಹಿಂದಿನ ದಿನಗಳಲ್ಲಿ ಪ್ರಬಲ ವರ್ಗದವರು ಮಾತ್ರ ಅಧಿಕಾರವನ್ನು ಅನುಭವಿಸುತ್ತಿದ್ದರು. ಆದರೆ ಇಂದು  ಮತದಾನದಿಂದಾಗಿ ಸಾಮಾನ್ಯ ವ್ಯಕ್ತಿಗೂ ಅಧಿಕಾರ ಚಲಾಹಿಸುವ ಅವಕಾಶ ಸಿಕ್ಕಿದೆ. ಪ್ರಸ್ತುತ ಸಂವಿಧಾನ ಹೊರತಾಗಿ ದೇಶದ ಯಾವುದೇ ಅಭಿವೃದ್ಧಿ ಕೆಲಸವನ್ನು ಯೋಚಿಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಜೀವನದಲ್ಲಿ ಅಂಬೇಡ್ಕರ್‌ರವರ ಚಿಂತನೆ ಪಾಲಿಸಿದರೆ ಬದುಕು ಹಸನಾಗುತ್ತದೆ ಎಂದರು.

ಭಾರತದ ಸಂವಿಧಾನವು ತನ್ನ ನಾಗರಿಕರಿಗೆ ಮಾರ್ಗದರ್ಶಕ ಬೆಳಕಿನಂತೆ ಕಾರ್ಯನಿರ್ವಹಿಸುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಭಾರತೀಯ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ನಿಜಕ್ಕೂ ಶ್ಲಾಘನೀಯ ಕೆಲಸ ಮಾಡಿದ್ದು, ಅವರು ಸದಾ ಸ್ಮರಣೀಯರು ಎಂದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಯೋಗೇಶ್ ಕೈರೋಡಿ ವಹಿಸಿದ್ದರು.  ಸಂವಿಧಾನದ ಪವಿತ್ರವಾದದ್ದು, ನಮ್ಮ ದೇಶದಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳು ಸಂವಿಧಾನದ ಆಶಯದಲ್ಲಿ ನಡೆಯುತ್ತವೆ.  ಹಾಗಾಗಿ ವಿದ್ಯಾರ್ಥಿಗಳು ಸಂವಿಧಾನವನ್ನು ಓದುವುದರ ಜತೆಗೆ ಅದರ ಶ್ರೇಷ್ಠತೆಯನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂವಿಧಾನ ದಿನದ ಅಂಗವಾಗಿ ನಡೆದ "ಅಂಬೇಡ್ಕರ್ ಓದು" ಸ್ಪರ್ಧಯ ವಿಜೇತರಿಗೆ ಬಹುಮಾನದ ಜೊತೆಗೆ ಪ್ರಮಾಣ ಪತ್ರ ವಿತರಿಸಲಾಯಿತು.




ಕಾರ್ಯಕ್ರಮದ ಸಂಯೋಜಕಿ ಡಾ. ಜ್ಯೋತಿ ರೈ, ಉಪನ್ಯಾಸಕರು ಉಪಸ್ಥಿತರಿದ್ದರು.

ಆಶಯ ಗೀತೆ ದರ್ಶನ್ ತಂಡ ಹಾಡಿದರು. ದ್ವಿತೀಯ ವರ್ಷದ ವಾಣಿಜ್ಯ ವಿದ್ಯಾರ್ಥಿನಿ ಮನಿಷಾ ಸ್ವಾಗತಿಸಿ, ಅನುಷಾ.ಎಸ್ ವಂದಿಸಿ, ಸ್ಮಿತಾ ಭಟ್ ನಿರೂಪಿಸಿದರು.


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article