-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಸಂಚಾರದಲ್ಲಿದ್ದ ಆಟೊದೊಳಗಡೆ ಬ್ಲಾಸ್ಟ್: ಸ್ಥಳದಲ್ಲಿ ಆತಂಕದ ಸೃಷ್ಟಿ

ಮಂಗಳೂರು: ಸಂಚಾರದಲ್ಲಿದ್ದ ಆಟೊದೊಳಗಡೆ ಬ್ಲಾಸ್ಟ್: ಸ್ಥಳದಲ್ಲಿ ಆತಂಕದ ಸೃಷ್ಟಿ


ಮಂಗಳೂರು: ಸಂಚಾರದಲ್ಲಿದ್ದ ಆಟೋರಿಕ್ಷಾದೊಳಗಡೆ ಸ್ಪೋಟವಾಗಿರುವ ಆತಂಕಕಾರಿ ಘಟನೆ ನಗರದ ಕಂಕನಾಡಿ ಪೊಲೀಸ್ ಠಾಣೆಯ ಬಳಿಯ ನಾಗುರಿ ಎಂಬಲ್ಲಿ ನಡೆದಿದೆ.




ಆಟೋದೊಳಗಡೆ ಛಿದ್ರವಾಗಿರುವ ಕುಕ್ಕರ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಆಟೋ ಏರಿದ್ದ ಪ್ರಯಾಣಿಕನ ಕೈಯಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ‌ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ಆ ಬಳಿಕ ಸ್ಪೋಟವಾಗಿದೆ. ಪರಿಣಾಮ ಪ್ರಯಾಣಿಕ ಹಾಗೂ ಆಟೊ ಚಾಲಕ ಗಾಯಗೊಂಡಿದ್ದಾರೆ.



ನಾಗುರಿ ಎಂಬಲ್ಲಿಂದ ಪಂಪ್ ವೆಲ್ ಕಡೆಗೆ ಆಟೋ ಸಂಚರಿಸುತ್ತಿತ್ತು. ನಾಗುರಿಯಲ್ಲಿ ಆಟೋ ಹತ್ತಿದ ಪ್ರಯಾಣಿಕನ ಕೈಯಲ್ಲಿದ್ದ ಪ್ಲ್ಯಾಸ್ಟಿಕ್ ಬ್ಯಾಗ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಗಾಯಗೊಂಡ ಪ್ರಯಾಣಿಕ ಹಾಗೂ ಆಟೋ ಚಾಲಕನಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಾರ್ವಜನಿಕರು ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ. ಈ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸಲಾಗುತ್ತದೆ.‌ ಬ್ಲಾಸ್ಟ್ ಆಗಿರುವ ಬಗ್ಗೆ ಪ್ರತ್ಯಕ್ಷ ಸಾಕ್ಷಿಗಳು ಏನು ಹೇಳಿಲ್ಲ. ವಿಧಿ ವಿಜ್ಞಾನ ಇಲಾಖೆಯ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನೀಡಿದ ಬಳಿಕ ಸ್ಪೋಟದ ಮಾಹಿತಿ ತಿಳಿಯಲಿದೆ ಎಂದು ಎನ್.ಶಶಿಕುಮಾರ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ