-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಕಚ್: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿಯಾದ ಹೃದಯ ವಿದ್ರಾವಕ ಘಟನೆ ಕಚ್‌ನ ನರ್ಮದಾ ನಾಲೆಯಲ್ಲಿ ಸಂಭವಿಸಿದೆ ಎಂದು ಎಸ್ಪಿ ಸೌರಭ್ ಸಿಂಗ್ ಹೇಳಿದ್ದಾರೆ.

ಎಲ್ಲರ ಮೃತದೇಹಗಳನ್ನು ಕಾರ್ಯಾಚರಣೆ ನಡೆಸಿ ನಾಲೆಯಿಂದ ಮೇಲಕ್ಕೆತ್ತಲಾಗಿದೆ. ನೀರು ತೆಗೆಯಲೆಂದು ಕಾಲುವೆಗೆ ಬಗ್ಗಿದ ಮಹಿಳೆ ಮೊದಲು ನೀರು ಪಾಲಾಗಿದ್ದಾಳೆ. ಆಕೆಯನ್ನು ರಕ್ಷಿಸಲು ಹೋಗಿ ಈ ದುರಂತಕ್ಕೆ ಸಂಭವಿಸಿದೆ ಎಂದು ಅವರು ವಿವರಿಸಿದ್ದಾರೆ.

"ಮುಂದ್ರಾದ ಗುಂಡಾಲಾ ಗ್ರಾಮದ ನರ್ಮದಾ ಕಾಲುವೆಯಲ್ಲಿ ಒಂದು ಕುಟುಂಬದ ಐದು ಮಂದಿ ನೀರು ಪಾಲಾಗಿದ್ದಾರೆ. ಪೊಲೀಸರು ಎಲ್ಲ ದೇಹಗಳನ್ನು ಹೊರ ತೆಗೆದಿದ್ದಾರೆ. ನೀರು ತರಲು ಕಾಲುವೆಗೆ ಹೋದ ಮಹಿಳೆಯೊಬ್ಬರು ಜಾರಿ ಬಿದ್ದಾಗ ಅವರನ್ನು ರಕ್ಷಿಸಲು ಹೋದ ಕುಟುಂಬದ ಐದು ಮಂದಿ ಮುಳುಗಿದರು' ಎಂದು ಕಚ್ ಪಶ್ಚಿಮ ಎಸ್ಪಿ ಸೌರಭ್ ಸಿಂಗ್ ಹೇಳಿದ್ದಾರೆ. ಈ ಬಗ್ಗೆ ndtv.com ವರದಿ ಮಾಡಿದೆ.

Ads on article

Advertise in articles 1

advertising articles 2

Advertise under the article

ಸುರ