-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೆಳ್ತಂಗಡಿ: ಪೆರಾಲ್ದರಕಟ್ಟೆಯಲ್ಲಿ ಜನ - ಜಾನುವಾರುಗಳ ಮೇಲೆರಗಿದ ಹುಚ್ಚುನಾಯಿ: ಹಲವರಿಗೆ ಗಾಯ

ಬೆಳ್ತಂಗಡಿ: ಪೆರಾಲ್ದರಕಟ್ಟೆಯಲ್ಲಿ ಜನ - ಜಾನುವಾರುಗಳ ಮೇಲೆರಗಿದ ಹುಚ್ಚುನಾಯಿ: ಹಲವರಿಗೆ ಗಾಯ

ಬೆಳ್ತಂಗಡಿ: ಇಲ್ಲಿನ ಬಳೆಂಜ ಗ್ರಾಪಂ ವ್ಯಾಪ್ತಿಯ ಪೆರಾಲ್ದರಕಟ್ಟೆ ಎಂಬಲ್ಲಿ ರೇಬಿಸ್ ಕಾಯಿಲೆ ಪೀಡಿತ ನಾಯಿಯೊಂದು ಜನ ಜಾನುವಾರುಗಳಿಗೆ ಕಚ್ಚಿ ರಾದ್ಧಾಂತ ಸೃಷ್ಟಿಸಿರುವ ಘಟನೆ ನಡೆದಿದೆ.

ದಾರಿ ಹೋಕ ಮಹಿಳೆಯರಿಗೆ, ಹಟ್ಟಿಗೆ ನುಗ್ಗಿ ಜಾನುವಾರುಗಳಿಗೆ, ಮನೆಯ ಸಮೀಪದಲ್ಲಿಯೇ ಕಟ್ಟಿ ಹಾಕಿರುವ ಮೇಕೆ ಮರಿಗೆ ಈ ರೇಬಿಸ್ ಪೀಡಿತ ನಾಯಿ ಕಚ್ಚಿ ಗಾಯಗೊಳಿಸಿದೆ. ಈ ನಾಯಿ ಬೀದಿಬದಿಯ ಭಾಗಶಃ ಎಲ್ಲಾ ಶ್ವಾನಗಳ ಮೇಲೂ ಈ ಹುಚ್ಚು ನಾಯಿ ದಾಳಿ ನಡೆಸಿದೆ.‌ ಬಳಿಕ ಸಾರ್ವಜನಿಕರು ಗ್ರಾಪಂ ಸದಸ್ಯ ನಿಝಾಂರವರ ನೇತೃತ್ವದಲ್ಲಿ ಸಾರ್ವಜನಿಕರು ಹುಚ್ಚು ನಾಯಿಯನ್ನು ಬೆನ್ನಟ್ಟಿ ಹೊಡೆದು ಸಾಯಿಸಿದ್ದಾರೆ. ಇಲ್ಲದಿದ್ದರೆ‌ ಆ ನಾಯಿ ಇನ್ನಷ್ಟು ಅಪಾಯವನ್ನು ತಂದೊಡ್ಡುವ ಸಾಧ್ಯತೆ‌ಯಿದೆ ಎನ್ನಲಾಗಿದೆ.

ಹುಚ್ಚ ನಾಯಿ ಹಾವಳಿಯ ಬಗ್ಗೆ ಈಗಾಗಲೇ ನಮ್ಮ ಇಲಾಖೆಯ ಗಮನಕ್ಕೆ ಬಂದಿದೆ. ಇಂದು‌ ಸ‌ಂಜೆಯೇ ಸ್ಥಳಕ್ಕೆ ತೆರಳಿ ಗಾಯಗಳಾಗಿರುವ ಜನ‌, ಜಾನುವಾರುಗಳಿಗೆ ಲಸಿಕೆ ನೀಡುವ ಕಾರ್ಯ ಮಾಡಲಾಗುತ್ತದೆ ಎಂದು ಬೆಳ್ತಂಗಡಿ ಪಶುಸಂಗೋಪನೆ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ.‌ಮಂಜ ನಾಯ್ಕ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article