ಮದುವೆ ಮುರಿದು ಬಿದ್ದು ಬೆನ್ನಲ್ಲೇ ಅಭಿಮಾನಿಗಳಿಗೆ GOOD NEWS ಕೊಟ್ಟ ವೈಷ್ಣವಿ ಗೌಡ!


ಅಗ್ನಿಸಾಕ್ಷಿ ಖ್ಯಾತಿಯ ವೈಷ್ಣವಿ ಗೌಡ  ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೊಚ್ಚ ಹೊಸ ಪಾತ್ರದ ಮೂಲಕ ಟಿವಿ ಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಸ್ವಪ್ನ ಕೃಷ್ಣ ನಿರ್ದೇಶನದ ಸೀತಾರಾಮ ಧಾರಾವಾಹಿಯಲ್ಲಿ ನಾಯಕಿಯಾಗಿ ವೈಷ್ಣವಿ ಎಂಟ್ರಿ ಕೊಡ್ತಿದ್ದಾರೆ. ʻಮಂಗಳಗೌರಿ ಮದುವೆʼ ಖ್ಯಾತಿಯ ಗಗನ್‌ಗೆ ಜೋಡಿಯಾಗಿ ನಟಿ ಬರುತ್ತಿದ್ದಾರೆ. 

ಸದ್ಯದಲ್ಲೇ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿದ್ದು, `ಅಗ್ನಿಸಾಕ್ಷಿ’ ನೋಡಿ ಮೆಚ್ಚಿಕೊಂಡಿದ್ದ ಫ್ಯಾನ್ಸ್‌ಗೆ ಸೀತಾರಾಮ ಸೀರಿಯಲ್ ಮೂಲಕ ಕೂಡ ನಟಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡ್ತಾರೆ ಎಂಬುದನ್ನ ಕಾದುನೋಡಬೇಕಿದೆ.