-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ವಿಮಾನದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ವೈದ್ಯರೊಂದಿಗೆ ನೆರವಾದ ಮಂಗಳೂರು ಮೂಲದ ಗಗನಸಖಿ

ವಿಮಾನದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಗೆ ವೈದ್ಯರೊಂದಿಗೆ ನೆರವಾದ ಮಂಗಳೂರು ಮೂಲದ ಗಗನಸಖಿ


ಮಂಗಳೂರು: ಲಂಡನ್‌ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ವಿಮಾನದಲ್ಲಿ ಹೃದಯಾಘಾತಕ್ಕೊಳಗಾಗಿರುವ ವ್ಯಕ್ತಿಯ ಪ್ರಾಣ ರಕ್ಷಣೆಗೆ ಮುಂದಾದ ವೈದ್ಯರಿಗೆ ಮಂಗಳೂರು ಮೂಲದ ಗಗನಸಖಿಯೂ ನೆರವಾಗಿ ಗಮನ ಸೆಳೆದಿದ್ದಾರೆ.

ಈ ಘಟನೆಯ ಬಗ್ಗೆ ವೈದ್ಯ, ಮೂಲತಃ ಬೆಂಗಳೂರಿನವರಾದ ಲಂಡನ್‌ನಲ್ಲಿ ವೃತ್ತಿ ನಿಋವಹಿಸುತ್ತಿರುವ ಡಾ.ವಿಶ್ವರಾಜ್‌ ವೇಮಲ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನ.12ರಂದು ಲಂಡನ್ ನಿಂದ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೆ. ಈ ವೇಳೆ 43 ವರ್ಷದ ವ್ಯಕ್ತಿಯೊಬ್ಬರಿಗೆ ಹಠಾತ್ತಾಗಿ ಹೃದಯಾಘಾತವಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಏನು ಮಾಡುವುದೆಂದು ಚಿಂತಿಸುತ್ತಿದ್ದಾಗ, ತನ್ನಲ್ಲಿರುವ ಆಟೋಮೇಟೆಡ್‌ ಎಕ್ಸ್‌ಟರ್ನಲ್‌ ಡಿಫಿಬ್ರಿಲೇಟರ್‌ (ಎಇಡಿ) ನೆರವಾಯಿತು.

ಈ ವೇಳೆ ಗಗನಸಖಿಯರಾದ ಮಲ್ಲಿಶಾ ಹಾಗೂ ಮಂಗಳೂರು ನಗರದ ಗಿರಿಥಾ ನೆರವಾಗಿದ್ದಾರೆ. ಅಂತಿಮವಾಗಿ ವಿಮಾನವನ್ನು ಮುಂಬಯಿಯಲ್ಲಿ ಇಳಿಸಿ ತುರ್ತು ನಿಗಾ ಘಟಕಕ್ಕೆ ಹಸ್ತಾಂತರಿಸಲಾಯಿತು. ಈ ವೇಳೆ ರೋಗಿಯ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು. ಬಳಿಕ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಡಾ. ವಿಶ್ವರಾಜ್‌ ಬರೆದುಕೊಂಡಿದ್ದಾರೆ.


Ads on article

Advertise in articles 1

advertising articles 2

Advertise under the article

ಸುರ