-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ತಾನು ನೋಡಿದ್ದ ಯುವಕನನ್ನು ವಿವಾಹವಾಗಲು ಒಲ್ಲೆಯೆಂದ ಪುತ್ರಿಯನ್ನೇ ಹತ್ಯೆ ಮಾಡಿದ ತಾಯಿ

ತಾನು ನೋಡಿದ್ದ ಯುವಕನನ್ನು ವಿವಾಹವಾಗಲು ಒಲ್ಲೆಯೆಂದ ಪುತ್ರಿಯನ್ನೇ ಹತ್ಯೆ ಮಾಡಿದ ತಾಯಿ

ಚೆನ್ನೈ: ತಾನು ನೋಡಿರುವ ಯುವಕನನ್ನು ವಿವಾಹವಾಗಲು ಒಪ್ಪದ ಪುತ್ರಿಯನ್ನು ಹೆತ್ತತಾಯಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ನ.23ರಂದು ನಡೆದಿದೆ.

ಪಿಚೈ ಮತ್ತು ಆರುಮುಗ ಖಣಿ ದಂಪತಿಯ ಪುತ್ರಿ ಪಿ. ಅರುಣಾ (19) ಹತ್ಯೆಯಾದ ಯುವತಿ. ಪುತ್ರಿಯನ್ನು ಹತ್ಯೆ ಮಾಡಿದ ಬಳಿಕ ಆಕೆಯ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಸದ್ಯ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೃತ ಅರುಣಾಳ ತಂದೆ ಮತ್ತು ಸಹೋದರ ಚೆನ್ನೈನಲ್ಲಿ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಅರುಣಾ ಕೊಯಮತ್ತೂರಿನಲ್ಲಿ ನರ್ಸಿಂಗ್ ಓದುತ್ತಿದ್ದಳು. ಆರು ತಿಂಗಳ ಹಿಂದೆ ಮನೆಗೆ ಮರಳಿದ್ದಳು. ಈ ವೇಳೆ ಕುಟುಂಬ ಅರುಣಾಗೆ ಮದುವೆಯಾಗಲು ಗಂಡು ನೋಡಿದ್ದರು. ಆಕೆಯ ತಾಯಿಯೇ ವರನನ್ನು ಗೊತ್ತುಪಡಿಸಿದ್ದಳು. ಆದರೆ, ಈ ಮದುವೆಯಾಗಲು ಅರುಣಾ ವಿರೋಧಿಸಿದ್ದಳು.

ಮದುವೆಗೆ ವಿರೋಧಿಸಿದ ಬಳಿಕ ತಾಯಿ ಮತ್ತು ಪುತ್ರಿಯ ನಡುವೆ ವಾಗ್ವಾದ ನಡೆದಿದೆ. ತಾಳ್ಮೆ ಕಳೆದುಕೊಂಡ ತಾಯಿ, ಮಗಳ ಕುತ್ತಿಗೆ ಬಿಗಿದು, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಇದಾದ ಬಳಿ ತಾನೂ ವಿಷಕಾರಿ ಪೌಡರ್ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ, ಸ್ಥಳೀಯರು ಆಕೆಯನ್ನು ತಡೆದು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Ads on article

Advertise in articles 1

advertising articles 2

Advertise under the article

ಸುರ