-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ರಸ್ತೆ ಅಪಘಾತದಲ್ಲಿ ಗರ್ಭಿಣಿ ಪತ್ನಿ ಮೃತ್ಯು: ಮನನೊಂದು  ಆತ್ಮಹತ್ಯೆಗೆ ಶರಣಾದ ಪತಿ

ರಸ್ತೆ ಅಪಘಾತದಲ್ಲಿ ಗರ್ಭಿಣಿ ಪತ್ನಿ ಮೃತ್ಯು: ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

ಪುಣೆ(ಮಹಾರಾಷ್ಟ್ರ): ಆಸ್ಪತ್ರೆಗೆ ತಿಂಗಳ ಚಿಕಿತ್ಸೆಗೆ ಬಂದ ನಾಲ್ಕು ತಿಂಗಳ ಗರ್ಭಿಣಿ ಪತ್ನಿ ರಸ್ತೆ ಅಪಘಾತದಲ್ಲಿ ದಾರುಣವಾಗಿ ಕಣ್ಣೆದುರೇ ಮೃತಪಟ್ಟಿರುವುದನ್ನು ಸಹಿಸಲಾಗದೆ ದುಃಖದಿಂದ ಪತಿಯೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪುಣೆಯಲ್ಲಿ ನಡೆದಿದೆ.

ದೊಂಡಕರ್ವಾಡಿಯ ರಮೇಶ್ ನನ್ನಾಥ್ ಕನಕರ್ (29) ಸಾವನ್ನಪ್ಪಿರುವ ಯುವಕ. ರಮೇಶ್ ಎಂಟು ತಿಂಗಳ ಹಿಂದೆ ವಿದ್ಯಾ ಎಂಬಾಕೆಯನ್ನು ಮದುವೆಯಾಗಿದ್ದಾರೆ. ಇದೀಗ ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ಕಳೆದ ವಾರ ಪುಣೆಯ ನಾರಾಯಣ ಗಾಂವ್ ಆಸ್ಪತ್ರೆಗೆ ತಿಂಗಳ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಅವರ ಬೈಕ್ ಗೆ ಟ್ರಾಕ್ಟರ್ ಮುಖಾಮುಖಿಯಾಗಿದೆ.

ಪರಿಣಾಮವಾಗಿ ಪತ್ನಿ ವಿದ್ಯಾ ಬೈಕ್‌ನಿಂದ ಬಿದ್ದಿದ್ದಾರೆ. ಈ ವೇಳೆ ಆಕೆ ತಲೆಯ ಮೇಲೆಯೇ ಟ್ರಾಕ್ಟರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಕಣ್ಣಾರೆ ಕಂಡಿರುವ ರಮೇಶ್ ಶಾಕ್‌ಗೆ ಒಳಗಾಗಿದ್ದರು. ಪರಿಣಾಮ ಒತ್ತಡಕ್ಕೆ ಒಳಗಾಗಿದ್ದ ಆತ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ಕಿರಿದಾದ ಮತ್ತು ಕೆಟ್ಟ ರಸ್ತೆಗಳಿಂದಾಗಿ ಈ ಸಾವು ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ