-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Sulya -ಹೃದಯಾಘಾತದಿಂದ 7ವರ್ಷದ ಮಗು ಸಾವು.ಸುಳ್ಯದ ಅಮರಮುಡ್ನೂರು ಗ್ರಾಮದಲ್ಲಿ ಘಟನೆ.

Sulya -ಹೃದಯಾಘಾತದಿಂದ 7ವರ್ಷದ ಮಗು ಸಾವು.ಸುಳ್ಯದ ಅಮರಮುಡ್ನೂರು ಗ್ರಾಮದಲ್ಲಿ ಘಟನೆ.

ಸುಳ್ಯ

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಎಂಬ ಬಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.1 ರಂದು ವರದಿಯಾಗಿದೆ‌.

ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ನ.1 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದನು. ಮಧ್ಯಾಹ್ನ ದ ವೇಳೆಗೆ ಬಾಲಕನಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಜ್ವರ ಇರುವ ಬಗ್ಗೆ ಅವನ ಪೋಷಕರಿಗೆ ತಿಳಿಸಿದರು. ಬಾಲಕನ ತಂದೆ ಚಂದ್ರಶೇಖರ ಆಚಾರ್ಯ ರವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿರುತ್ತಾನೆ. ತಕ್ಷಣ ಶಿಕ್ಷಕರು ಹಾಗೂ ಸ್ಥಳೀಯ ರು ಸೇರಿ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದರು. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರೆಂದು ತಿಳಿದು ಬಂದಿದೆ. ತುರ್ತು ಚಿಕಿತ್ಸಾ ಘಟಕದಲ್ಲಿ ಇರಿಸಿ ವೈದ್ಯರು ಜೀವ ಉಳಿಸಲು ಸತತವಾಗಿ ಪ್ರಯತ್ನಿಸಿದರು ಪ್ರಯೋಜನವಾಗಲಿಲ್ಲ. ಬಾಲಕನ ತಂದೆ ಚಂದ್ರಶೇಖರ ಆಚಾರ್ಯ ಕುಂಟಿಕಾನ ಅದೇ ಶಾಲೆಯ ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾಗಿದ್ದರು, ತಾಯಿ ಗೀತಾ ಮತ್ತು ಓರ್ವ ಸಹೋದರ ಅಕ್ಷಯ್ 6‌ನೇ ತರಗತಿ ವಿದ್ಯಾರ್ಥಿ ಹಾಗೂ ಬಂಧುಗಳನ್ನು, ಸಹಪಾಠಿ ಮಿತ್ರರನ್ನು ಅಗಲಿರುತ್ತಾನೆ.

Ads on article

Advertise in articles 1

advertising articles 2

Advertise under the article

ಸುರ