-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಸಂಚಾರದಲ್ಲಿದ್ದ ಆಟೋದಲ್ಲಿ ಸ್ಪೋಟ ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ನಡೆದ ಭಯೋತ್ಪಾದನಾ ಕೃತ್ಯ: ಡಿಜಿಪಿ ಪ್ರವೀಣ್ ಸೂದ್ ಟ್ವೀಟ್

ಸಂಚಾರದಲ್ಲಿದ್ದ ಆಟೋದಲ್ಲಿ ಸ್ಪೋಟ ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ನಡೆದ ಭಯೋತ್ಪಾದನಾ ಕೃತ್ಯ: ಡಿಜಿಪಿ ಪ್ರವೀಣ್ ಸೂದ್ ಟ್ವೀಟ್

ಮಂಗಳೂರು: ನಗರದ ಹೊರವಲಯದಲ್ಲಿರುವ ಗರೋಡಿ ಸಮೀಪ ಸಂಚಾರದಲ್ಲಿದ್ದ ಆಟೋದಲ್ಲಿ ಬ್ಲಾಸ್ಟ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ‌ ಪ್ರವೀಣ್ ಸೂದ್ ಅವರು ಟ್ವೀಟ್ ಮಾಡಿ 'ಈ ಸ್ಪೋಟ ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿ ನಡೆದ ಭಯೋತ್ಪಾದನಾ ಕೃತ್ಯ' ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ.


'ಈ ಸ್ಪೋಟ ಆಕಸ್ಮಿಕವಲ್ಲ ಉದ್ದೇಶಪೂರ್ವಕವಾಗಿಯೇ ನಡೆದಿದೆ. ಗಂಭೀರವಾಗಿ ಹಾನಿ ಉಂಟುಮಾಡುವ ಉದ್ದೇಶದಿಂದಲೇ ಈ ಕೃತ್ಯ ಎಸಗಲಾಗಿದೆ. ಕರ್ನಾಟಕ‌ ರಾಜ್ಯ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಯೊಂದಿಗೆ ಘಟನೆಯ ಬಗ್ಗೆ ಆಳವಾಗಿ ತನಿಖೆ ನಡೆಸುತ್ತಿದ್ದಾರೆ' ಎಂದು ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article