-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನೆಟ್ಟಾರ್ ಹಂತಕರ ಪತ್ತೆಗೆ ಬಹುಮಾನ ಘೋಷಿಸಿ ಎನ್ಐಎ ಲುಕ್ಔಟ್ ನೊಟೀಸ್ ಜಾರಿ

ಮಂಗಳೂರು: ನೆಟ್ಟಾರ್ ಹಂತಕರ ಪತ್ತೆಗೆ ಬಹುಮಾನ ಘೋಷಿಸಿ ಎನ್ಐಎ ಲುಕ್ಔಟ್ ನೊಟೀಸ್ ಜಾರಿ

ಮಂಗಳೂರು: ತಲೆಮರೆಸಿಕೊಂಡ ನಾಲ್ವರು ಪ್ರವೀಣ್ ನೆಟ್ಟಾರು ಹಂತಕರ ಮೇಲೆ ಎನ್ಐಎ ಲುಕ್ಔಟ್ ನೊಟೀಸ್ ಜಾರಿಗೊಳಿಸಿದೆ. 

ಜುಲೈ 27ರಂದು ಬಿಜೆಪಿ ಯುವ ಮೋರ್ಚ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಾಪತ್ತೆಯಾದ ಹಂತಕರು ಇನ್ನೂ ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಈ ನಾಲ್ವರು ಆರೋಪಿಗಳ ಪತ್ತೆಗೆ ಎನ್ಐಎ ಲುಕ್ ಔಟ್ ನೋಟಿಸ್ ಹೊರಡಿಸಿ ಲಕ್ಷಾಂತರ ರೂ. ಬಹುಮಾನ ಘೋಷಿಸಿದೆ‌. 


ಬೆಳ್ಳಾರೆ ನಿವಾಸಿ ಮೂಡುಮನೆ ಮಹಮ್ಮದ್ ಮುಸ್ತಫಾ ಸುಳಿವು ನೀಡಿದರೆ 5 ಲಕ್ಷ ರೂ. ಬಹುಮಾನ. ಮಡಿಕೇರಿ ಗದ್ದಿಗೆ ಮಸೀದಿ ಬಳಿ ನಿವಾಸಿ ತುಫೈಲ್ ಎಚ್.ಎಂ. ಸುಳಿವು ನೀಡಿದ್ದಲ್ಲಿ 5 ಲಕ್ಷ ರೂ. ಬಹುಮಾನ. ಸುಳ್ಯದ ಕಲ್ಲುಮುಟ್ಟು ನಿವಾಸಿ ಉಮ್ಮರ್ ಫಾರೂಕ್ ಸುಳಿವು ನೀಡಿದರೆ 2 ಲಕ್ಷ ರೂ. ಬಹುಮಾನ. ಬೆಳ್ಳಾರೆ ನಿವಾಸಿ ಅಬೂಬುಕರ್ ಸಿದ್ದೀಕ್ ಸುಳಿವು ನೀಡಿದರೆ 5 ಲಕ್ಷ ರೂ. ಬಹುಮಾನವನ್ನು ಎನ್ಐಎ ಘೋಷಿಸಿದೆ.

ಇವರೆಲ್ಲರೂ ನಿಷೇಧಿತ ಪಿಎಫ್ಐ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದರು ಎಂದು ತಿಳಿದು ಬಂದಿದೆ. ಮಾಹಿತಿ ನೀಡುವವರು 080-29510900, 8904241100 ಅಥವಾ info.bir.nia@gov.inಗೆ ಮಾಹಿತಿ ನೀಡಬೇಕೆಂದು ಎನ್ಐಎ ಮನವಿ ಮಾಡಿದೆ. ಅಲ್ಲದೆ ಮಾಹಿದಾರರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ ಎಂದು ತಿಳಿಸಿದೆ. ಈ ಪ್ರಕರಣ ಸಂಬಂಧ ಒಟ್ಟು 10 ಮಂದಿ ಆರೋಪಿಗಳನ್ನು ರಾಜ್ಯ ಪೊಲೀಸ್ ಮತ್ತು ಎನ್ಐಎ ಅಧಿಕಾರಿಗಳ ತಂಡ ಬಂಧಿಸಿತ್ತು.

Ads on article

Advertise in articles 1

advertising articles 2

Advertise under the article

ಸುರ