-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬೀದಿನಾಯಿಗಳ ದಾಳಿಗೆ 4ರ ಮಗು ಬಲಿ

ಬೀದಿನಾಯಿಗಳ ದಾಳಿಗೆ 4ರ ಮಗು ಬಲಿ


ಭದ್ರಾವತಿ: ಇಲ್ಲಿನ ದೊಣಬಘಟ್ಟ (ದಡಮಘಟ್ಟ) ಗ್ರಾಮದಲ್ಲಿ ಬೀದಿನಾಯಿಗಳ ಹಿಂಡೊಂದು ಮಾಡಿರುವ ದಾಳಿಗೆ 4 ವರ್ಷದ ಮಗು ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಬುಧವಾರ ಸಂಜೆ ನಡೆದಿದೆ.

ಸೈಯದ್ ಮದನಿ ಸಾವನ್ನಪ್ಪಿದ ನಾಲ್ಕು ವರ್ಷದ ಪುಟ್ಟ ಮಗು.

ಸಂಜೆ ಸುಮಾರು 4ರ ಸುಮಾರಿಗೆ‌ ಮಗು ಸೈಯದ್ ಮದನಿ ತಂದೆ ಜಮೀನಿಗೆ ಹೋಗಿದ್ದಾರೆ. ಈ ವೇಳೆ ತಂದೆಯನ್ನು ಮಗು ಹಿಂಬಾಲಿಸಿಕೊಂಡು ಹೋಗಿದೆ. ಆಗ ಸುಮಾರು 7-8 ಬೀದಿ ನಾಯಿಗಳ ಹಿಂಡೊಂದು ಮಗುವಿನ ಮೇಲೆ ದಾಳಿ ಮಾಡಿದೆ. ಅನತಿ ದೂರದಲ್ಲೇ ಮಗುವಿನ ತಂದೆ ಯಂತ್ರದಲ್ಲಿ ಭತ್ತ ಕಟಾವು ಮಾಡಿಸುತ್ತಿದ್ದರು. ಆದರೆ ಯಂತ್ರದ ಶಬ್ದಕ್ಕೆ ಬೀದಿ ನಾಯಿಗಳ ದಾಳಿ ಆಗಿತ್ತಿರುವು ತಿಳಿಯದಾಗಿದೆ.

ನಾಯಿಯ ದಾಳಿಯಿಂದ ಮಗು ತೀವ್ರ ಅಸ್ವಸ್ಥತೆಯಿಂದ ಬಳತ್ತಿರುವುದನ್ನು ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗೆ ಮಗುವನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.


Ads on article

Advertise in articles 1

advertising articles 2

Advertise under the article

ಸುರ