-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹಾಸ್ಟೆಲ್‌ನಲ್ಲಿದ್ದ ಪುತ್ರಿಯನ್ನು ನೋಡಲು ಮತ್ತೊಬ್ಬ ಪುತ್ರಿಯೊಂದಿಗೆ ಬೈಕ್‌ನಲ್ಲಿ ಹೊರಟ ದಂಪತಿ ಅಪಘಾತದಲ್ಲಿ ದುರಂತ ಅಂತ್ಯ

ಹಾಸ್ಟೆಲ್‌ನಲ್ಲಿದ್ದ ಪುತ್ರಿಯನ್ನು ನೋಡಲು ಮತ್ತೊಬ್ಬ ಪುತ್ರಿಯೊಂದಿಗೆ ಬೈಕ್‌ನಲ್ಲಿ ಹೊರಟ ದಂಪತಿ ಅಪಘಾತದಲ್ಲಿ ದುರಂತ ಅಂತ್ಯ

ಹೈದರಾಬಾದ್: ಹಾಸ್ಟೆಲ್‌ನಲ್ಲಿದ್ದ ಪುತ್ರಿಯನ್ನು ನೋಡಲು ಮತ್ತೊಬ್ಬ ಪುತ್ರಿಯೊಂದಿಗೆ ಬೈಕ್‌ನಲ್ಲಿ ಹೊರಟ ದಂಪತಿ ದುರಂತವಾಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ರಂಗಾರೆಡ್ಡಿ ಜಿಲ್ಲೆ ಶಮ್ಯಾಬಾದ್ ಮಂಡಲದ ಪೆದ್ದಾಶಪುರ್ ನಲ್ಲಿರುವ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ನಡೆದಿದೆ.

ಫರೂಕ್ ನಗರ ಮಂಡಲದ ಕಾದಿಯಲಕುಂಟ ಗ್ರಾಮದ ಗೋಪಾಲ್ (47) ಮತ್ತು ಅಂಜಲಿ (42) ದಂಪತಿ ಹಾಗೂ ಸ್ವಾತಿ(9) ಮೃತಪಟ್ಟವರು. 

ಈ ದಂಪತಿಗೆ ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನಿದ್ದಾನೆ. ಇವರ ಮೂರನೇ ಪುತ್ರಿ ಮಧುಲತಾ, ಛಂಪಾಪೇಟೆ ನಗರದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ವಿದ್ಯಾಭಾಸ ಮಾಡುತ್ತಿದ್ದಾಳೆ. ಈಕೆಯನ್ನು ನೋಡಲೆಂದು ಗೋಪಾಲ್ ಹಾಗೂ ಅಂಜಲಿ ತಮ್ಮ ಕಿರಿಯ ಪುತ್ರಿ ಸ್ವಾತಿ (9) ಯೊಂದಿಗೆ ಬೈಕ್‌ನಲ್ಲಿ ತೆರಳಿದ್ದರು. ಈ ವೇಳೆ ಪೆದ್ದಾಶಪುರ್ ಪಟ್ಟಣದಲ್ಲಿ ಕ್ಯಾಂಟರ್ ಒಂದು ನಿಯಂತ್ರಣ ಕಳೆದುಕೊಂಡು ಕಾರಿಗೆ ಡಿಕ್ಕಿ ಹೊಡೆದು, ಇವರ ಬೈಕ್‌ಗೆ ಗುದ್ದಿದೆ. ಪರಿಣಾಮ ಪುತ್ರಿ ಸಹಿತ ದಂಪತಿ ಕೆಳಗೆ ಬಿದ್ದು ದುರಂತ ಸಾವಿಗೀಡಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ ಪೊಲೀಸರು ಮೃತದೇಹಗಳನ್ನು ಹೈದರಾಬಾದ್‌ನ ಒಸ್ಮಾನಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕ್ಯಾಂಟರ್ ವಾಹನದ ಅತಿ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಮತ್ತು ಪೊಲೀಸರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ