-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಬಾಯ್ಕಾಟ್ ಬಿಸಿ ತಟ್ಟಿದವರಿಗೆ ತಿರುಗೇಟು ನೀಡಿದ ಶಾರುಖ್ ಖಾನ್

ಬಾಯ್ಕಾಟ್ ಬಿಸಿ ತಟ್ಟಿದವರಿಗೆ ತಿರುಗೇಟು ನೀಡಿದ ಶಾರುಖ್ ಖಾನ್


ನವದೆಹಲಿ: ಕೇಸರಿ ವಿವಾದವನ್ನು ಹುಟ್ಟು ಹಾಕಿರುವ ‘ಪಠಾಣ್​’ ಸಿನಿಮಾಕ್ಕೆ ಬಾಯ್ಕಾಟ್ ಬಿಸಿ ತಗುಲಿದೆ. ಈ ವಿಚಾರಕ್ಕೆ ಶಾರುಖ್​ ಖಾನ್​ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಸೋಶಿಯಲ್​ ಮೀಡಿಯಾಗಳಲ್ಲಿ ನೆಗೆಟಿವ್​ ವಿಚಾರಗಳನ್ನು ಹಬ್ಬಿಸುವ ಕುರಿತು ‘ಪಠಾಣ್​’ ಸಿನಿಮಾದ ಹೀರೋ ಶಾರುಖ್​ ಖಾನ್  ಕೊಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.




ಗುರುವಾರ ಸಂಜೆ ಕೊಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನೆಗೊಂಡಿದೆ. ಈ ಕಾರ್ಯಕ್ರಮಕ್ಕೆ ಶಾರುಖ್​ ಖಾನ್​, ಅಮಿತಾಭ್​ ಬಚ್ಚನ್​, ಜಯಾ ಬಚ್ಚನ್, ರಾಣಿ ಮುಖರ್ಜಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರು ಹಾಜರಿ ಹಾಕಿದ್ದರು. ಈ ವೇದಿಕೆಯಲ್ಲಿ ಶಾರುಖ್​ ಮಾತನಾಡಿರುವ ವಿಡಿಯೋ ವೈರಲ್​ ಆಗಿದೆ. 


‘ಸಂಕುಚಿತ ದೃಷ್ಟಿಕೋನದಿಂದ ಈ ರೀತಿ ಆಗುತ್ತಿದೆ. ಈ ಸಂದರ್ಭ ಸಿನಿಮಾಗೆ ಮಹತ್ವದ ಪಾತ್ರವಿದೆ. ಜಗತ್ತು ಸಹಜ ಸ್ಥಿತಿಗೆ ಬಂದಿದೆ. ನಾವೆಲ್ಲರೂ ಸಂತೋಷವಾಗಿದ್ದೇವೆ. ನಾನು ಹೆಚ್ಚು ಖುಷಿಯಾಗಿದ್ದೇನೆ. ಜಗತ್ತು ಏನು ಬೇಕಾದರೂ ಮಾಡಿಕೊಳ್ಳಲಿ. ನಾನು, ನೀವು ಮತ್ತು ಪಾಸಿಟಿವ್​ ಮನಸ್ಥಿತಿ ಇರುವ ಎಲ್ಲ ಜನರು ಜೀವಂತವಾಗಿದ್ದೇವೆ ಅಂತ ಹೇಳಲು ನನಗೆ ಯಾವುದೇ ಅಡೆತಡೆ ಇಲ್ಲ’ ಎಂದು ಅವರು ಎಲ್ಲಿಯೂ ‘ಪಠಾಣ್​’ ಚಿತ್ರದ ಹೆಸರು ಎತ್ತದೆ ಮಾತನಾಡಿದ್ದಾರೆ. ಆದರೆ ಭಾಷಣ ಮುಗಿಸುವಾಗ ಅವರು ಹೇಳಿದ ಒಂದು ಮಾತು ಸಖತ್​ ವೈರಲ್ ಆಗಿದೆ.​ ಹೇಳಿದ್ದಾರೆ.

ಶಾರುಖ್​ ಖಾನ್ ಮಾತನಾಡಿರುವ ವೀಡಿಯೋವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುತ್ತಿದ್ದಾರೆ. ‘ಪಠಾಣ್​’ ಚಿತ್ರವನ್ನು ಬಾಯ್ಕಾಟ್​ ಮಾಡಬೇಕು ಎಂದು ಬೊಬ್ಬೆ ಹೊಡೆಯುತ್ತಿರುವವರನ್ನು ಉದ್ದೇಶಿಸಿಯೇ ಶಾರುಖ್​ ಈ ರೀತಿ ಹೇಳಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ. ವಿರೋಧದ ನಡುವೆಯೂ ಪಠಾಣ್ ಸಿನಿಮಾದ ‘ಬೇಷರಂ ರಂಗ್​..’ ಹಾಡು ಧೂಳೆಬ್ಬಿಸುತ್ತಿದೆ. 5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡು ಸದ್ದು ಮಾಡುತ್ತಿದೆ.


Ads on article

Advertise in articles 1

advertising articles 2

Advertise under the article

ಸುರ