-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಉಳ್ಳಾಲ: ಸೋಮೇಶ್ವರ ಸಮುದ್ರ ವಿಹಾರಕ್ಕೆ ಬಂದಿದ್ದ ವ್ಯಕ್ತಿ ಮೃತ್ಯು

ಉಳ್ಳಾಲ: ಸೋಮೇಶ್ವರ ಸಮುದ್ರ ವಿಹಾರಕ್ಕೆ ಬಂದಿದ್ದ ವ್ಯಕ್ತಿ ಮೃತ್ಯು




ಉಳ್ಳಾಲ: ಉಳ್ಳಾಲದ ಸೋಮೇಶ್ವರ ಬೀಚ್ ಗೆ ಸಮುದ್ರ ವಿಹಾರಕ್ಕೆಂದು ಬಂದಿರುವ ವ್ಯಕ್ತಿ ಅಲೆಯ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತಪಟ್ಟವರು. ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಬಸ್ ಚಾಲಕರಾಗಿದ್ದ ಪ್ರಶಾಂತ್ ಬೇಕಲ್, ರವಿವಾರ ಬೆಳಗ್ಗೆ ಪುತ್ರ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್, ಅವರ ಪುತ್ರ ವಂದನ್ ಬೇಕಲ್ ಹಾಗೂ ಇತರ ಸ್ನೇಹಿತರೊಂದಿಗೆ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ಬಂದಿದ್ದರು. ಪ್ರತೀ ರವಿವಾರದಂತೆ ಅವರು ಇಂದು ಸಮುದ್ರ ತೀರಕ್ಕೆ ವಿಹಾರಕ್ಕೆ ಆಗಮಿಸಿದ್ದರು. ಎಂದಿನಂತೆ ಸಮುದ್ರಕ್ಕಿಳಿದಿದ್ದ ಪ್ರಶಾಂತ್ ನೀರುಪಾಲಾಗಿದ್ದಾರೆ.

ಪ್ರಶಾಂತ್ ಅವರ ಪುತ್ರ ಚಿರಾಯು ಈಜು ಪರಿಣತನಾಗಿದ್ದು ತಕ್ಷಣ ಹಗ್ಗದಿಂದ ತಂದೆಯನ್ನು ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ಹಾಕಿದ್ದಾರೆ. ಆದರೆ ಅದಾಗಲೇ ಪ್ರಶಾಂತ್ ಅಸುನೀಗಿದ್ದರು. ಮೃತ ಪ್ರಶಾಂತ್ ಅವರ ಏಕೈಕ ಪುತ್ರ ಚಿರಾಯು ಇಂಜಿನಿಯರಿಂಗ್ ವ್ಯಾಸಂಗ ನಡೆಸುತ್ತಿದ್ದಾರೆ. ಮೃತರು ತಾಯಿ, ಪತ್ನಿ, ಪುತ್ರ, ಇಬ್ಬರು ತಮ್ಮಂದಿರನ್ನು ಆಗಲಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ