-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ನಾಪತ್ತೆಯಾದ ಅರಸೀಕೆರೆಯ ಯುವಕನ ಮೃತದೇಹ ತೊಕ್ಕೊಟ್ಟಿನ ಬಾವಿಯೊಂದರಲ್ಲಿ ಪತ್ತೆ

ಮಂಗಳೂರು: ನಾಪತ್ತೆಯಾದ ಅರಸೀಕೆರೆಯ ಯುವಕನ ಮೃತದೇಹ ತೊಕ್ಕೊಟ್ಟಿನ ಬಾವಿಯೊಂದರಲ್ಲಿ ಪತ್ತೆ

ಉಳ್ಳಾಲ: ಪಾಸ್ ಪೋರ್ಟ್ ನವೀಕರಣ ಮಾಡಲೆಂದು ಬೆಂಗಳೂರಿನಿಂದ ಆಗಮಿಸಿ ತೊಕ್ಕೊಟ್ಟಿನ ಲಾಡ್ಜ್ ನಲ್ಲಿ ತಂಗಿದ್ದ ಯುವಕನೋರ್ವನ ಮೃತದೇಹ ಲಾಡ್ಜ್ ಸಮೀಪದ ಮನೆಯೊಂದರ ಬಾವಿಯಲ್ಲಿ ರವಿವಾರ ಪತ್ತೆಯಾಗಿದೆ.

ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ, ಬೆಂಗಳೂರಿನಲ್ಲಿ ವಾಸವಿದ್ದ ಮಹಂತೇಶ್ ಎ.ಎಸ್.(36) ಮೃತಪಟ್ಟ ದುರ್ದೈವಿ.

ಮಹಂತೇಶ್ ಕಳೆದ ಬುಧವಾರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿನ ಲಾಡ್ಜ್‌ನಲ್ಲಿ ತಂಗಿದ್ದರು. ಶುಕ್ರವಾರ ಸಂಜೆ ಲಾಡ್ಜ್ ಸಿಬ್ಬಂದಿ ರೂಂ ತಪಾಸಣೆ ಮಾಡಿದ್ದ ವೇಳೆ ಮಹಂತೇಶ್ ನಾಪತ್ತೆಯಾಗಿರುವ ವಿಚಾರ ತಿಳಿದು ಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಶನಿವಾರ ಮಹಂತೇಶ್ ಅವರ ಸಹೋದರಿ ಉಳ್ಳಾಲ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ದರು.

ಆದರೆ ರವಿವಾರ ಮಧ್ಯಾಹ್ನ ಅಂಬಿಕಾ ರೋಡ್ ಹೆದ್ದಾರಿಯ ಅಂಚಿನಲ್ಲಿರುವ‌ ಮನೆಯ ಬಾವಿಯೊಂದರಲ್ಲಿ ಮಹಂತೇಶ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ಉಳ್ಳಾಲ ಪೊಲೀಸರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಮೃತದೇಹದ ಪ್ಯಾಂಟ್ ಜೇಬಲ್ಲಿ ಲಾಡ್ಜ್ ನ ರೂಂ ಕೀಲಿ ಕೈ ಮತ್ತು ಮಹಂತೇಶ ಅರಸೀಕೆರೆ ಎಂದು ಸ್ಟಿಕ್ಕರ್ ಹಚ್ಚಿರುವ ಪೆನ್ ಡ್ರೈವ್ ಲಭ್ಯವಾಗಿದೆ. ಪೊಲೀಸರು ಲಾಡ್ಜ್ ಸಿಬ್ಬಂದಿಯನ್ನು ಕರೆಸಿ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ.

Ads on article

Advertise in articles 1

advertising articles 2

Advertise under the article

ಸುರ