-->

ಹೊರಗಿನಿಂದ ಲಾಕ್ ಮಾಡಿ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಒಳಗಿದ್ದವರು ಏನಾದರು ಗೊತ್ತೇ?

ಹೊರಗಿನಿಂದ ಲಾಕ್ ಮಾಡಿ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಒಳಗಿದ್ದವರು ಏನಾದರು ಗೊತ್ತೇ?


ನೆಲಮಂಗಲ: ಹೊರಗಿನಿಂದ ಲಾಕ್ ಮಾಡಿ ದುಷ್ಕರ್ಮಿಗಳು ಮನೆಯೊಂದಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ದಾಬಸಪೇಟೆ ಸಮೀಪದ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.  ಮನೆಯೊಳಗಿದ್ದ ದಂಪತಿ ಹಾಗೂ 5 ತಿಂಗಳ ಹಸುಗೂಸು ಅದೃಷ್ಟವಶಾತ್ ಪಾರಾಗಿದ್ದಾರೆ.

ಪುರುಷೋತ್ತಮ್ ಎಂಬವರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಿಂದ ಪುರುಷೋತ್ತಮ್ ಹಾಗೂ ಅವರ ಪತ್ನಿ ಆಶಾರಾಣಿಗೆ ಸುಟ್ಟ ಗಾಯಗಳಾಗಿವೆ. ಐದು ತಿಂಗಳ ಕೂಸಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ತಡರಾತ್ರಿ ಈ ಘಟನೆ ನಡೆದಿದೆ. ಮನೆಯೊಳಗಿಂದ ಬೊಬ್ಬೆ ಕೇಳಿದ ತಕ್ಷಣ ಸ್ಥಳೀಯರು ಎಚ್ಚೆತ್ತುಕೊಂಡು ಬೆಂಯ ನಂದಿಸಿದ್ದಾರೆ. ಬೆಂಕಿಯಿಂದ ಸುಟ್ಟುಗಾಯಗಳಾಗಿರುವ ಪುರುಷೋತ್ತಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಬಟ್ಟೆಗಳು, ಕೆಕ ವಸ್ತುಗಳು ಸುಟ್ಟು ಹೋಗಿವೆ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತನಿಖೆಯ ನಂತರ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಕಾರಣಕ್ಕೆ ಉತ್ತರ ದೊರೆಯಲಿದೆ.

Ads on article

Advertise in articles 1

advertising articles 2

Advertise under the article