-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಹೊರಗಿನಿಂದ ಲಾಕ್ ಮಾಡಿ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಒಳಗಿದ್ದವರು ಏನಾದರು ಗೊತ್ತೇ?

ಹೊರಗಿನಿಂದ ಲಾಕ್ ಮಾಡಿ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು: ಒಳಗಿದ್ದವರು ಏನಾದರು ಗೊತ್ತೇ?


ನೆಲಮಂಗಲ: ಹೊರಗಿನಿಂದ ಲಾಕ್ ಮಾಡಿ ದುಷ್ಕರ್ಮಿಗಳು ಮನೆಯೊಂದಕ್ಕೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ದಾಬಸಪೇಟೆ ಸಮೀಪದ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.  ಮನೆಯೊಳಗಿದ್ದ ದಂಪತಿ ಹಾಗೂ 5 ತಿಂಗಳ ಹಸುಗೂಸು ಅದೃಷ್ಟವಶಾತ್ ಪಾರಾಗಿದ್ದಾರೆ.

ಪುರುಷೋತ್ತಮ್ ಎಂಬವರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಿಂದ ಪುರುಷೋತ್ತಮ್ ಹಾಗೂ ಅವರ ಪತ್ನಿ ಆಶಾರಾಣಿಗೆ ಸುಟ್ಟ ಗಾಯಗಳಾಗಿವೆ. ಐದು ತಿಂಗಳ ಕೂಸಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ತಡರಾತ್ರಿ ಈ ಘಟನೆ ನಡೆದಿದೆ. ಮನೆಯೊಳಗಿಂದ ಬೊಬ್ಬೆ ಕೇಳಿದ ತಕ್ಷಣ ಸ್ಥಳೀಯರು ಎಚ್ಚೆತ್ತುಕೊಂಡು ಬೆಂಯ ನಂದಿಸಿದ್ದಾರೆ. ಬೆಂಕಿಯಿಂದ ಸುಟ್ಟುಗಾಯಗಳಾಗಿರುವ ಪುರುಷೋತ್ತಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಬಟ್ಟೆಗಳು, ಕೆಕ ವಸ್ತುಗಳು ಸುಟ್ಟು ಹೋಗಿವೆ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತನಿಖೆಯ ನಂತರ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಕಾರಣಕ್ಕೆ ಉತ್ತರ ದೊರೆಯಲಿದೆ.

Ads on article

Advertise in articles 1

advertising articles 2

Advertise under the article

ಸುರ