-->
ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ದಿನಸಿ ಅಂಗಡಿ ಮಾಲಕ ಮೃತ್ಯು

ಸುರತ್ಕಲ್: ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾದ ದಿನಸಿ ಅಂಗಡಿ ಮಾಲಕ ಮೃತ್ಯು




ಸುರತ್ಕಲ್: ಸುರತ್ಕಲ್ ಬಳಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ದುಷ್ಕರ್ಮಿಗಳಿಬ್ಬರ ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ದಿನಸಿ ಅಂಗಡಿ ಮಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೃಷ್ಣಾಪುರ ನಿವಾಸಿ ಜಲೀಲ್ ಮೃತಪಟ್ಟ ದುರ್ದೈವಿ.

ನೈತಂಗಡಿಯಲ್ಲಿ ಜಲೀಲ್ ಅವರು ದಿನಸಿ ಅಂಗಡಿ ಹೊಂದಿದ್ದರು. ಅವರು ಅಂಗಡಿಯಲ್ಲಿದ್ದ ವೇಳೆ ದುಷ್ಕರ್ಮಿಗಳಿಬ್ಬರು ದಾಳಿ ನಡೆಸಿ ಅವರ ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ, ಗಂಭೀರವಾಗಿ ಗಾಯಗೊಂಡಿದ್ದ ಜಲೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ.

ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

  

Advertise in articles 1

advertising articles 2

ಉಚಿತವಾಗಿ ಸುದ್ದಿ ಕೊಡುತ್ತಿರುವ ನಮಗೆ ಸಹಾಯ ಮಾಡಿ

  

Pay Rs 100

  

Advertise under the article