-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಪೊಲೀಸರ ಅಮಾನವೀಯ ವರ್ತನೆಗೆ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಬೀದಿ ಬದಿ ವ್ಯಾಪಾರಿ

ಪೊಲೀಸರ ಅಮಾನವೀಯ ವರ್ತನೆಗೆ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಬೀದಿ ಬದಿ ವ್ಯಾಪಾರಿ

ಕಾನ್ಪುರ: ಪೊಲೀಸರ ಅಮಾನವೀಯ ವರ್ತನೆಯಿಂದ ಬೀದಿ ಬದಿ ವ್ಯಾಪರಿಯೊಬ್ಬ ರೈಲಿನಡಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡಿರುವ ಭೀಕರ ಘಟನೆಯೊಂದು ಕಲ್ಯಾಣಪುರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಗೆ ಪೊಲೀಸರೇ ನೇರ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹೌದು, ಬೀದಿ ಬದಿ ವ್ಯಾಪಾರಿಯಾದ ಇರ್ಫಾನ್, ತರಕಾರಿ ಮಾರಾಟ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ರೈಲ್ವೇ ಪೊಲೀಸರು ಆತನ ತಕ್ಕಡಿ ಇನ್ನಿಯ ವಸ್ತುಗಳನ್ನು ರೈಲ್ವೇ ಹಳಿಯ ಮೇಲೆ ಎಸೆದಿದ್ದಾರೆ. ಆಗ ಇರ್ಫಾನ್ ತನ್ನ ವಸ್ತುಗಳನ್ನು ಸಂಗ್ರಹಿಸಿಕೊಳ್ಳಲು ರೈಲ್ವೇ ಹಳಿಗೆ ಇಳಿದಿದ್ದಾರೆ. ಈ ವೇಳೆ ಆಗಮಿಸಿದ ರೈಲು ಇರ್ಫಾನ್ ಕಾಲಿನ ಮೇಲೆಯೇ ಸಂಚರಿಸಿದೆ. ಪರಿಣಾಮ ಇರ್ಫಾನ್ ತನ್ನೆರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ.

ಇಂದಿರಾ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಶಾದಾಬ್ ಖಾನ್ ಜಿಟಿ ರಸ್ತೆಯಲ್ಲಿನ ಬೀದಿ ಬದಿ ವ್ಯಾಪಾರಿಗಳನ್ನು ಬೆನ್ನಟ್ಟಿದ್ದಾರೆ. ನಂತರ ವ್ಯಾಪಾರಿಯ ತಕ್ಕಡಿ, ತರಕಾರಿಗಳನ್ನು ರೈಲ್ವೇ ಹಳಿಯ ಮೇಲೆ ಎಸೆದಿದ್ದಾರೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳ ಹೇಳಿರುವುದು ವರದಿಯಾಗಿದೆ.

ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪಘಾತ ನಡೆಯುತ್ತಿದ್ದಂತೆ, ರೈಲ್ವೇ ಹಳಿ ಮೇಲೆ ಒದ್ದಾಡುತ್ತಿದ್ದ ಇರ್ಫಾನ್‌ನನ್ನು ಪೊಲೀಸ್ ಅಧಿಕಾರಿಯೊಬ್ಬರು ಬಂದು ಸಾರ್ವಜನಿಕರ ಸಹಾಯದಿಂದ ಮೇಲಕ್ಕೆ ಕರೆದುಕೊಂಡು ಬಂದಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ