-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: 26ರ ವಿವಾಹಿತ ಯುವತಿ ಆತ್ಮಹತ್ಯೆಗೆ ಶರಣು; ಸಿಲ್ಲಿ ಕಾರಣ?

ಮಂಗಳೂರು: 26ರ ವಿವಾಹಿತ ಯುವತಿ ಆತ್ಮಹತ್ಯೆಗೆ ಶರಣು; ಸಿಲ್ಲಿ ಕಾರಣ?

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಮನನೊಂದ ವಿವಾಹಿತ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ನಡೆದಿದೆ.

ಬಾಳ ನಿವಾಸಿ ದಿವ್ಯಾ(26) ಆತ್ಮಹತ್ಯೆಗೆ ಶರಣಾದ ಯುವತಿ.

ದಿವ್ಯಾ ಬಾಳ ನಿವಾಸಿ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರ ವಿವಾಹ 2022ರ ಮಾರ್ಚ್ ನಲ್ಲಿ ನಡೆದಿತ್ತು. ಇವರ ವೈವಾಹಿಕ ಜೀವನದಲ್ಲಿ ಉತ್ತಮ ಬಾಂಧವ್ಯ ಹೊಂದಿದ್ದರು. ಈ ದಂಪತಿ ಜ.22ರಂದು ನೆರೆಮನೆಗೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದಾರೆ. ಅಲ್ಲಿ ಊಟ ಮುಗಿಸಿದ ಬಳಿಕ 'ಮನೆಗೆ ಹೋಗುವ' ಎಂದು ದಿವ್ಯಾ ಪತಿಯನ್ನು ಒತ್ತಾಯಿಸಿದ್ದಾರೆ. ಆದರೆ ಪತಿ ಹರೀಶ್ ಆಗಲೇ ಅಲ್ಲಿಂದ ಹೊರಡಲು ಒಪ್ಪಲಿಲ್ಲ.

ಆದ್ದರಿಂದ ದಿವ್ಯಾ ಓರ್ವಳೇ ಮನೆಗೆ ಬಂದಿದ್ದಾರೆ. ಇದೇ ವಿಚಾರದಲ್ಲಿ ಮನನೊಂದ ದಿವ್ಯಾ ಮನೆಯ ಬೆಡ್ ರೂಂನ ಕಿಟಕಿಗೆ ತಮ್ಮ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ. ಈ ಬಗ್ಗೆ ದಿವ್ಯಾ ತಾಯಿ ಈ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ದೂರು  ದಾಖಲಿಸಿದ್ದಾರೆ. ಆದರೆ ಸುರತ್ಕಲ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article