-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಶಾಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿನಿ

ಶಾಲೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ವಿದ್ಯಾರ್ಥಿನಿ


ಇಂದೋರ್: ಇತ್ತೀಚೆಗೆ ಸಣ್ಣವಯಸ್ಸಿನವರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲೂ ಶಾಲೆಗೆ ಹೋಗುವ ಸಣ್ಣಪುಟ್ಟ ಮಕ್ಕಳು ಬಲಿಯಾಗುತ್ತಿದ್ದಾರೆ‌. ಇದೀಗ ಆ ಪಟ್ಟಿಗೆ ಹದಿಹರೆಯದ ವಿದ್ಯಾರ್ಥಿನಿಯೊಬ್ಬಳೂ ಸೇರಿದ್ದಾಳೆ. ಶಾಲೆಗೆ ತೆರಳಿರುವ ಆಕೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ.

ಮಧ್ಯಪ್ರದೇಶದ ಇಂದೋರ್‌ನ ಉಷಾನಗರದಲ್ಲಿರುವ ಶಾಲೆಯೊಂದರಲ್ಲಿ ಈ ಪ್ರಕರಣ ನಡೆದಿದೆ. ಪಿಯುಸಿ ವ್ಯಾಸಂಗ ಮಾಡುತ್ತಿರುವ ವೃಂದಾ ತ್ರಿಪಾಠಿ (16) ಸಾವಿಗೀಡಾದ ವಿದ್ಯಾರ್ಥಿನಿ. ಗಣರಾಜ್ಯೋತ್ಸವದ ಕಾರ್ಯಕ್ರಮದ ರಿಹರ್ಸಲ್‌ಗೆಂದು ಈಕೆ ಶಾಲೆಗೆ ಬಂದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬುಧವಾರ ರಿಹರ್ಸಲ್‌ಗೆಂದು ಹೋಗಿದ್ದ ಆಕೆ ಅಲ್ಲೇ ಕುಸಿದು ಬಿದ್ದಿದ್ದಳು. ಅಸ್ವಸ್ಥಗೊಂಡ ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ. ವಿದ್ಯಾರ್ಥಿನಿ ಕೋಲ್ಡ್ ವೇವ್‌ನಿಂದಾಗಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ