-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮೂವರು ಮಕ್ಕಳೊಂದಿಗೆ ಸಂಪ್ ಗೆ ಹಾರಿ ಪ್ರಾಣ ಬಿಟ್ಟ ಮಹಿಳೆ: ಕಾರಣ ಇದು...?

ಮೂವರು ಮಕ್ಕಳೊಂದಿಗೆ ಸಂಪ್ ಗೆ ಹಾರಿ ಪ್ರಾಣ ಬಿಟ್ಟ ಮಹಿಳೆ: ಕಾರಣ ಇದು...?


ವಿಜಯಪುರ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತಮ್ಮ ಮೂವರು ಮಕ್ಕಳೊಂದಿಗೆ ನೀರಿನ ಸಂಪ್‌ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಬಳಿಯ ವಿಠಲವಾಡಿ ತಾಂಡಾದಲ್ಲಿ ನಡೆದಿದೆ.

ಗೀತಾ ರಾಮು ಚೌವ್ಹಾಣ (32) ಮೃತ ಮಹಿಳೆ. ಆಕೆಯ ಮಕ್ಕಳಾದ ಸೃಷ್ಟಿ (6) ಸಮರ್ಥ (4) ಹಾಗೂ ಕಿಶನ್ (3) ದುರಂತದಲ್ಲಿ ಮೃತಪಟ್ಟವರು. ಪತಿ ರಾಮುವಿನೊಂದಿಗೆ ಗೀತಾ ಜಗಳವಾಡಿದ್ದರು. ಪರಿಣಾಮ ಬೇಸತ್ತ ಗೀತಾ ಈ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾಳೆ.

ಪತಿ ರಾಮು ಮಲಗಿದ್ದ ವೇಳೆ ಮೂವರು ಮಕ್ಕಳನ್ನು ನೀರಿನ ಸಂಪ್ ಗೆ ಎಸೆದ ಗೀತಾ, ಬಳಿಕ ತಾನೂ ಸಂಪ್ನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ