-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಹಿಂದುತ್ವ ಪದ ಆರ್ ಎಸ್ ಎಸ್ ಹೆಡ್ ಕ್ವಾಟರ್ ನಲ್ಲಿ ಉದ್ಬವ; ರಣದೀಪ್ ಸಿಂಗ್ ಸುರ್ಜೆವಾಲಾ

ಮಂಗಳೂರು: ಹಿಂದುತ್ವ ಪದ ಆರ್ ಎಸ್ ಎಸ್ ಹೆಡ್ ಕ್ವಾಟರ್ ನಲ್ಲಿ ಉದ್ಬವ; ರಣದೀಪ್ ಸಿಂಗ್ ಸುರ್ಜೆವಾಲಾ


ಮಂಗಳೂರು: ಕರಾವಳಿ ಭಾಗದಲ್ಲಿ  ಹಿಂದುತ್ವ ಅಮಲನ್ನು ಬಿತ್ತಲಾಗಿದೆ. ಆದರೆ ಉಪನಿಷತ್ , ವೇದ , ಗೀತೆಯಲ್ಲಿ ಯಲ್ಲೂ ಹಿಂದುತ್ವ ಪದದ ಉಲ್ಲೇಖವಿಲ್ಲ. ಈ ಪದ ಆರ್ ಎಸ್ ಎಸ್ ಹೆಡ್ ಕ್ವಾಟರ್ ನಲ್ಲಿ ಉದ್ಬವವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್  ಸುರ್ಜೆವಾಲಾ ಕಟುವಾಗಿ ಟೀಕಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರಾವಳಿಯಲ್ಲಿ ಇತ್ತಿಚಿನ ವರ್ಷಗಳಲ್ಲಿ ಕೋಮು ದ್ವೇಷವನ್ನು ಬಿತ್ತಲಾಗುತ್ತಿದೆ. ಇಂತಹ ಮನಸ್ಥಿತಿಗೆ ಈ ಬಾರಿ ಉತ್ತರ ಕೊಡುವ ಕಾಲ ಬಂದಿದೆ ಎಂದರು.

ಮೋದಿ-ಬೊಮ್ಮಾಯಿ ಸರಕಾರ ಜನಸಾಮಾನ್ಯರ ಮೇಲೆ ದೌರ್ಜನ್ಯವೆಸಗುತ್ತಿದೆ. ನರೇಂದ್ರ ಮೋದಿ ಅಹಂಕಾರದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಬಿಜೆಪಿಯವರ ಆಲೋಚನೆ, ಚಿಂತನೆ ಕ್ರಿಯೆ ಎಲ್ಲವೂ ಅಹಂಕಾರದಿಂದ ಕೂಡಿದೆ. ಚುನಾವಣೆಯ ಸಂದರ್ಭ ಬಿಜೆಪಿ ಮುಖಂಡರು ನೀಡಿರುವ ಯಾವ ಭರವಸೆಯೂ ಈಡೇರಿಸಿಲ್ಲ.‌ ಇಂತಹ ಮೂರ್ಖರು ಇಂದು ಅಧಿಕಾರದಲ್ಲಿದ್ದಾರೆ. ಪ್ರಜಾಧ್ವನಿ ಯಾತ್ರೆಯ ಮೂಲಕ ಈಗ ಬದಲಾವಣೆಯ ಗಾಳಿ ಬೀಸಬೇಕಾಗಿದೆ‌. ಬಿಜೆಪಿಯನ್ನು ಕಿತ್ತು ಒಗೆಯುವ ಕಾಲ ಬಂದಿದೆ ಎಂದು ರಣದೀಪ್ ಸಿಂಗ್  ಸುರ್ಜೆವಾಲಾ ಹೇಳಿದರು.




Ads on article

Advertise in articles 1

advertising articles 2

Advertise under the article

ಸುರ