-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಮಂಗಳೂರು: ಬಿಷಪ್ ಕಾಂಪ್ಲೆಕ್ಸ್‌ನಲ್ಲಿ ಸುಪ್ರಭಾತ ಸ್ವೀಟ್ಸ್‌ ಶುಭಾರಂಭ

ಮಂಗಳೂರು: ಬಿಷಪ್ ಕಾಂಪ್ಲೆಕ್ಸ್‌ನಲ್ಲಿ ಸುಪ್ರಭಾತ ಸ್ವೀಟ್ಸ್‌ ಶುಭಾರಂಭ


ಮಂಗಳೂರಿನ ಪ್ರಖ್ಯಾತ ಹೋಳಿಗೆ ಉತ್ಪಾದನಾ ಸಂಸ್ಥೆ ಸುಪ್ರಭಾತ ಸ್ವೀಟ್ಸ್ ತನ್ನ ಮಳಿಗೆಯನ್ನು ನಗರದ ಹೃದಯಭಾಗದಲ್ಲಿ ಆರಂಭಿಸಿದೆ. ಮಂಗಳೂರಿನ ಕೊಡಿಯಾಲ್ ಬೈಲ್‌ನಲ್ಲಿ ಇರುವ ಬಿಷಪ್ ಕಾಂಪ್ಲೆಕ್ಸ್‌ನಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಉದ್ಘಾಟನೆಗೊಂಡಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಖಜಾಂಚಿ ಹಾಗೂ ಖ್ಯಾತ ನೋಟರಿ ವಕೀಲರಾದ ಎ. ಪದ್ಮರಾಜ್ ಮಳಿಗೆಯನ್ನು ಉದ್ಘಾಟಿಸಿದರು. 

ವಿಶ್ವ ವಿಖ್ಯಾತ ಜಾದೂಗಾರ ಶ್ರೀ ಕುದ್ರೋಳಿ ಗಣೇಶ್, ಹುಬ್ಬಳ್ಳಿಯ ಅನನ್ಯ ಫೀಡ್ಸ್‌ ಚೇರ್‌ಮ್ಯಾನ್ ದಿವಾಣ ಗೋವಿಂದ ಭಟ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.

ಕಳೆದ 26 ವರ್ಷಗಳಿಂದ ಉತ್ತಮ ಗುಣಮಟ್ಟದ ಹೋಳಿಗೆ ಹಾಗೂ ಇತರ ಸಿಹಿ ತಿಂಡಿಗಳ ತಯಾರಿಯಲ್ಲಿ ಜನಮೆಚ್ಚುಗೆ ಗಳಿಸಿದ ಸುಪ್ರಭಾತ ಇದೀಗ ನೇರ ಗ್ರಾಹಕರ ಅನುಕೂಲಕ್ಕೆ ಈ ಮಳಿಗೆಯನ್ನು ಆರಂಭಿಸಿದೆ ಎಂದು ಸಂಸ್ಥೆಯ ಮಾಲಕರಾದ ರಾಜೇಶ್ವರ್ ಭಟ್ ಮತ್ತು ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು.
ಕಲಾವಿದೆ ತೃಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Ads on article

Advertise in articles 1

advertising articles 2

Advertise under the article

ಸುರ