-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ಎಟಿಎಂಗೆ ಹಣ ತುಂಬಿಸಲು ಕಳಿಸಿದರೆ ಕೋಟಿ ರೂ‌.ನೊಂದಿಗೆ ಪರಾರಿಯಾದ ಭೂಪ

ಎಟಿಎಂಗೆ ಹಣ ತುಂಬಿಸಲು ಕಳಿಸಿದರೆ ಕೋಟಿ ರೂ‌.ನೊಂದಿಗೆ ಪರಾರಿಯಾದ ಭೂಪ




ಬೆಂಗಳೂರು: ಎಟಿಎಂ ಮಷೀನ್‌ಗಳಿಗೆ ಹಣ ತುಂಬಿಸುವ ಕೆಲಸ ಮಾಡುತ್ತಿದ್ದ ಈತ ಕಳೆದ ಒಂದು ದಶಕದಿಂದ ನಿಯತ್ತಾಗಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಇತ್ತೀಚೆಗೊಮ್ಮೆ ಏನಾಯಿತೋ ಗೊತ್ತಿಲ್ಲ, ಏಕಾಏಕಿ ಮೊಬೈಲ್ ಸ್ವಿಚ್ ಆಫ್ ಮಾಡಿ, ಯಾರ ಕೈಗೂ ಸಿಕ್ಕಿಲ್ಲ.  ಸಮಸ್ಯೆ ಏನಾಯಿತೆಂದು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಅಸಲಿಯತ್ತು ವಿಚಾರ ಬಹಿರಂಗಗೊಂಡಿದೆ.

ರಾಜೇಶ್ ಮೇಸ್ತಾ ಎಂಬಾತ ಸೆಕ್ಯೂರ್ ವ್ಯಾಲ್ಯೂ ಇಂಡಿಯಾ ಲಿ. ಸಂಸ್ಥೆಯ ಉದ್ಯೋಗಿಯಾಗಿದ್ದ. ಈ ಸಂಸ್ಥೆ ಎಟಿಎಂಗಳಿಗೆ ಹಣ ತುಂಬಿಸುವ ಕಾರ್ಯ ಮಾಡುತ್ತಿದೆ. ಕಳೆದ 11 ವರ್ಷದಿಂದ ಇದೇ ಸಂಸ್ಥೆಯಲ್ಲಿ ರಾಜೇಶ್ ಮೇಸ್ತಾ ಕೆಲಸ ಮಾಡುತ್ತಿದ್ದ. ಆದರೆ ಜನವರಿ ಅಂತ್ಯದಲ್ಲಿ ಇದ್ದಕ್ಕಿದ್ದಂತೆ ಈತನ ಫೋನ್ ಸ್ವಿಚ್ ಆಪ್ ಆಗಿದೆ. ಹಾಗೂ ಆತ ಎಸ್ಕೆಪ್ ಆಗಿದ್ದ. ಇದರಿಂದ ಅನುಮಾನಗೊಂಡ ಸಂಸ್ಥೆ ರಾಜೇಶ್ ಹಣ ತುಂಬಿಸುತ್ತಿದ್ದ ಎಟಿಎಂಗಳ ಆಡಿಟ್ ಮಾಡಿಸಿದೆ. ಆಗ ಈತ 1.30 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿರುವುದು ತಿಳಿದು ಬಂದಿದೆ. 

ಸದ್ಯ ಈ ಬಗ್ಗೆ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರಿಂದ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

Ads on article

Advertise in articles 1

advertising articles 2

Advertise under the article